ಸುದ್ದಿಗಳು

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

Advertisement

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

10 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

19 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

1 day ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago