Advertisement
ಸುದ್ದಿಗಳು

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Share

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 hour ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

15 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

16 hours ago