Advertisement
ಸುದ್ದಿಗಳು

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Share

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago