Advertisement
ಸುದ್ದಿಗಳು

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Share

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

13 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

28 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago