Advertisement
ಸುದ್ದಿಗಳು

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Share

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

1 hour ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

7 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago