ಚುನಾವಣೆ ಹೊತ್ತಿನಲ್ಲೇ ಕನಕಪುರ ಬಂಡೆ ಡಿಕೆಶಿಗೆ ಶಾಕ್ | CBI ತನಿಖೆಗೆ ಕೋರ್ಟ್ ಅಸ್ತು |

April 20, 2023
7:31 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್? : ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror