ಸುದ್ದಿಗಳು

ಚುನಾವಣೆ ಹೊತ್ತಿನಲ್ಲೇ ಕನಕಪುರ ಬಂಡೆ ಡಿಕೆಶಿಗೆ ಶಾಕ್ | CBI ತನಿಖೆಗೆ ಕೋರ್ಟ್ ಅಸ್ತು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Advertisement
Advertisement

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್? : ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

13 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago