Advertisement
ಸುದ್ದಿಗಳು

ಚುನಾವಣೆ ಹೊತ್ತಿನಲ್ಲೇ ಕನಕಪುರ ಬಂಡೆ ಡಿಕೆಶಿಗೆ ಶಾಕ್ | CBI ತನಿಖೆಗೆ ಕೋರ್ಟ್ ಅಸ್ತು |

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್? : ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago