ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್? : ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…