ಮಂಗಳೂರಿನಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ |

June 10, 2024
1:00 PM

ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್‌ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್‌ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್‌ ಉದ್ಘಾಟಿಸಿದರು.…….ಮುಂದೆ ಓದಿ…..

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್‌ ಹಾಗೂ ಚೆಸ್‌ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ, ಕಾರ್ಯದರ್ಶಿ ಅಭಿಷೇಕ್‌ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್‌, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್‌, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..

ಚೆಸ್‌ದ ಮೂಲಕ ಮಕ್ಕಳ ಯೋಚನಾಶಕ್ತಿ ಬೆಳವಣಿಗೆಯಾಗುತ್ತದೆ. ಸೋಲು-ಗೆಲುವಿನ ಬಗ್ಗೆ ಯೋಚನೆ ಬೇಕಾಗಿಲ್ಲ. ಅನುಭವಗಳು ಮಕ್ಕಳನ್ನು ಗಟ್ಟಿ ಮಾಡುತ್ತದೆ. ಆಟದಲ್ಲಿ ಎದುರಾಳಿಯ ಯೋಚನೆಯ ಬಗ್ಗೆಯೂ ಅರಿವು ಮೂಡುತ್ತದೆ. ಹೀಗಾಗಿ ಚೆಸ್‌ ಆಟವು ಸರ್ವತೋಮುಖವಾದ ಬೆಳವಣಿಗೆಗೆ ಕಾರಣವಾಗುತ್ತದೆ-
ಶ್ರುತ ಜಿತೇಶ್‌, ಸಂಚಾಲಕಿ , ಎಸ್‌ಡಿಎಂ ಶಾಲೆ ಮಂಗಳೂರು

ದ ಕ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಚೆಸ್‌ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಹೆಜ್ಜೆಗಳನ್ನು ಇರಿಸುತ್ತಿದೆ. ಪಂದ್ಯಾಟಗಳನ್ನು ನಡೆಸುವ ಮೂಲಕ ಜಿಲ್ಲೆಯ ಚೆಸ್‌ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸುತ್ತಿದೆ. ರಾಜ್ಯಮಟ್ಟದಲ್ಲೂ ಇಲ್ಲಿನ ಪ್ರತಿಭೆಗಳು ಗುರುತಿಸವಂತಾಗಬೇಕು
ರಮೇಶ್‌ ಕೋಟೆ, ಅಧ್ಯಕ್ಷರು, ಡಿಕೆಸಿಎ, ಮಂಗಳೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror