ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

January 26, 2025
7:14 AM

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ.

Advertisement
Advertisement
Advertisement
Advertisement

ಕಳೆದ ನವೆಂಬರ್‌ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ  ಡಿಆರ್‌ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ  ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.

Advertisement

ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್‌ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ  ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್‌ ಐ ವಶಕ್ಕೆ ಪಡೆದಿದೆ ತನಿಖೆ  ಮುಂದುವರಿದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror