ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

January 26, 2025
7:14 AM

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ.

ಕಳೆದ ನವೆಂಬರ್‌ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ  ಡಿಆರ್‌ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ  ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.

ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್‌ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ  ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್‌ ಐ ವಶಕ್ಕೆ ಪಡೆದಿದೆ ತನಿಖೆ  ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror