ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ವಶಕ್ಕೆ ತೆಗೆದುಕೊಂಡಿದೆ.
ಕಳೆದ ನವೆಂಬರ್ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ ಡಿಆರ್ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.
ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್ ಐ ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…