Advertisement
MIRROR FOCUS

ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

Share

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ.

ಕಳೆದ ನವೆಂಬರ್‌ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ  ಡಿಆರ್‌ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ  ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.

ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್‌ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ  ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್‌ ಐ ವಶಕ್ಕೆ ಪಡೆದಿದೆ ತನಿಖೆ  ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

9 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

12 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

24 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

24 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago