MIRROR FOCUS

ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ.

Advertisement
Advertisement

ಕಳೆದ ನವೆಂಬರ್‌ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ  ಡಿಆರ್‌ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ  ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.

ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್‌ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ  ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್‌ ಐ ವಶಕ್ಕೆ ಪಡೆದಿದೆ ತನಿಖೆ  ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

9 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

10 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

10 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

11 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

11 hours ago