ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ವಶಕ್ಕೆ ತೆಗೆದುಕೊಂಡಿದೆ.
ಕಳೆದ ನವೆಂಬರ್ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ ಡಿಆರ್ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.
ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್ ಐ ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…