ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ವಶಕ್ಕೆ ತೆಗೆದುಕೊಂಡಿದೆ.
ಕಳೆದ ನವೆಂಬರ್ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ ಡಿಆರ್ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.
ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್ ಐ ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…