Advertisement
MIRROR FOCUS

ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ

Share

ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ.

ಕಳೆದ ನವೆಂಬರ್‌ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ  ಡಿಆರ್‌ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ  ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.

Advertisement

ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್‌ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ  ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್‌ ಐ ವಶಕ್ಕೆ ಪಡೆದಿದೆ ತನಿಖೆ  ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

15 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

15 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago