ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ವಶಕ್ಕೆ ತೆಗೆದುಕೊಂಡಿದೆ.
ಕಳೆದ ನವೆಂಬರ್ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ ಡಿಆರ್ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.
ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್ ಐ ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…