ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ವಶಕ್ಕೆ ತೆಗೆದುಕೊಂಡಿದೆ.
ಕಳೆದ ನವೆಂಬರ್ ಕೊನೆಯ ವಾರ ಅಡಿಕೆಯನ್ನು ಗೋಡಂಬಿ ಎಂದು ನಮೂದಿಸಿ ಇಂಡೋನೇಶಿಯಾದಿಂದ ತೂತುಕುಡಿ ಬಂದರಿಗೆ ಆಮದು ಮಾಡಿಕೊಂಡಿದ್ದ ಪ್ರಕರಣದಲ್ಲಿ ಡಿಆರ್ಐ ಒಂದು ಕಂಟೇನರ್ ಅನ್ನು ವಶಪಡಿಸಿಕೊಂಡಿತ್ತು. ತನಿಖೆಯ ವೇಳೆ ಅಡಿಕೆಯನ್ನು ಬೇರೆ ಉತ್ಪನ್ನ ಎಂದು ತಪ್ಪಾಗಿ ಘೋಷಿಸುವ ಮೂಲಕ ಆಮದು ಮಾಡಿಕೊಳ್ಳುವ ವ್ಯಕ್ತಿಗಳ ಗುಂಪಿನ ಬಗ್ಗೆ ಸುಳಿವು ಲಭ್ಯವಾಗಿತ್ತು.
ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ವಾಣಿಜ್ಯ ಸಚಿವಾಲಯ ವಿಧಿಸಿದ ನಿರ್ಬಂಧಗಳು ಹಾಗೂ ಆಮದು ಸುಂಕಗಳ ಕಾರಣ, ಡಿ ಆರ್ ಐ ಗೋಡಂಬಿ ಎಂದು ಘೋಷಿಸಲಾದ ಕಂಟೇನರ್ ಪರಿಶೀಲಿಸಿತು. ಅದನ್ನು ತೆರೆದಾಗ 1.25 ಕೋಟಿ ಮೌಲ್ಯದ 22 ಮೆಟ್ರಿಕ್ ಟನ್ ಅಡಿಕೆ ಪತ್ತೆಯಾಗಿತ್ತು. ಬಳಿಕ ತನಿಖೆಯ ವೇಳೆ ಶಿಪ್ಪಿಂಗ್ ಕಂಪನಿಯ ಇಬ್ಬರು ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಯಲ್ಲಿ ಜಾನ್ ಅಲಿಯಾಸ್ ಶ್ರೀನಿವಾಸನ್ ಕಳ್ಳಸಾಗಣೆ ಕಾರ್ಯಾಚರಣೆಗೆ ಸಂಬಂಧಿಸಿದ್ದು, ಗುರುವಾರ ಡಿ ಆರ್ ಐ ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…