Opinion

ಅಕ್ಕಿ ತೊಳೆದ ನೀರನ್ನು ಚೆಲ್ಲದಿರಿ | ಕಲಗಚ್ಚುವಿನಲ್ಲಿದೆ ಅನೇಕ ಔಷಧಿಯ ಗುಣಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಕ್ಕಿ ತೊಳೆದ ನೀರು (ಕಲಗಚ್ಚು)( rice washed water)ನಲ್ಲಿ ತುಂಬಾ ಒಳ್ಳೆಯ ಔಷಧೀಯ ಗುಣ ಇದೆ. ಕಲಗಚ್ಚು ಎಂದು ಮೂಗು ಮುರಿಯುವ ಅಗತ್ಯ ಇಲ್ಲ. ಅಕ್ಕಿ ಎಂದರೆ ಬಿಳಿ ಅಕ್ಕಿ ಅಲ್ಲ, ಕೆಂಪಕ್ಕಿ(red rice) ಸಿಪ್ಪೆ ರಹಿತವಾಗಿ ಇರುವುದು ಅಲ್ಲ, ಸಿಪ್ಪೆ ಸಹಿತವಾಗಿ ಇರಬೇಕಾಗುತ್ತದೆ. ಅಕ್ಕಿಯನ್ನು ಮೊದಲು ಸಾಮಾನ್ಯ ನೀರಿನಲ್ಲಿ ತೊಳೆದುಬಿಡಿ. ಧೂಳುಗಳು ಹೋಗಿರುವುದು ಖಾತ್ರಿ ಮಾಡಿಕೊಳ್ಳಿ ನಂತರ ಮತ್ತೆ ನೀರು ಹಾಕಿ ಐದು ನಿಮಿಷ ಇಡಿ. ಚೆನ್ನಾಗಿ ತಿಕ್ಕಿ ತೊಳೆಯಿರಿ. ನೀರು ಬಗ್ಗಿಸಿದ ಅಕ್ಕಿಯನ್ನು ಅನ್ನವಾಗಿ ಮಾಡಿಕೊಳ್ಳಿ.

Advertisement

ಅಕ್ಕಿ ತೊಳೆದ ನೀರಿನಲ್ಲಿ ಏನೇನು ಇದೆ ಪ್ರಯೋಜನ:

  • ತೆಗೆದಿಟ್ಟ ನೀರನ್ನು ಬಿಳಿಯ ಬಟ್ಟೆಯಲ್ಲಿ ಸೋಸಿ ಒಂದು ಕಡೆ ಇಡಿ. ಅರ್ಧ ಗಂಟೆ ಬಿಟ್ಟಾಗ ತಳದಲ್ಲಿ ಬಿಳಿಯ ಬಣ್ಣದ ಹಿಟ್ಟು ನಿಂತಿರುತ್ತದೆ. ಅರಿಶಿಣ ಸ್ವಲ್ಪ ಸೇರಿಸಿ ಮುಖಕ್ಕೆ ಹಚ್ಚಿ. ಕೆಲವರಿಗೆ ಅರಿಶಿನ ಆಗುವುದಿಲ್ಲ ಅಂತವರಿಗೆ ಅರಿಶಿನದ ಬಳಕೆ ಬೇಡ.
  • ಅಕ್ಕಿ ತೊಳೆದ ನೀರಿನಿಂದ ಕಾಳುಮೆಣಸು ತೇದು ಹಚ್ಚುವುದರಿಂದ ಮೊಡವೆ ಗುಣವಾಗುತ್ತದೆ. ಇದನ್ನು ಚೆನ್ನಾಗಿ ಮಸಾಜ್ ಮಾಡಿ ಮುಂಗೈ ಮೊಣಕಾಲಿನ ಕೆಳಭಾಗ ಮುಖ ಕುತ್ತಿಗೆ ಕಿವಿಯ ಹಿಂಭಾಗ ಎಲ್ಲಾ ಕಡೆ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಮುಖದ ಕಾಂತಿ ಹೆಚ್ಚುತ್ತದೆ ಮತ್ತು ಮೊಣಕೈಯಲ್ಲಿರುವ ಸಣ್ಣ ಗುಳ್ಳೆ ಗಳು ಗುಣವಾಗುತ್ತದೆ.
  • ಅಕ್ಕಿ ತೊಳೆದ ನೀರನ್ನು ನಿಂಬೆ ರಸದೊಂದಿಗೆ ತಲೆಯ ಸ್ನಾನದ ಮೊದಲು ಕೂದಲಿಗೆ ಹಚ್ಚಿ ಒಣಗಿಸಿ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ನಯವಾಗಿ ಬೆಳೆಯುತ್ತದೆ. ಅಕ್ಕಿ ತೊಳೆದ ನೀರಿನಲ್ಲಿ ಹಿಮ್ಮಡಿಯನ್ನು ಮೃದುವಾಗಿ ಮಸಾಜ್ ಮಾಡುವುದರಿಂದ ಹಿಮ್ಮಡಿ ಒಡೆದಿರುವುದು ಗುಣವಾಗುತ್ತದೆ.
  • ಅಕ್ಕಿ ತೊಳೆದ ನೀರಿಗೆ ಕೆಂಪು ಕಲ್ಲು ಸಕ್ಕರೆ ಚೂರು ಏಲಕ್ಕಿ ಪುಡಿ ಅಗತ್ಯ ಇದ್ದಷ್ಟು ನೀರು ಹಾಕಿ ಜ್ಯೂಸ್ ಮಾಡಿ ಕುಡಿದರೆ ಕ್ಯಾಲ್ಸಿಯಂ ಹೆಚ್ಚುತ್ತದೆ ಮತ್ತು ದೇಹ ತಂಪಾಗುತ್ತದೆ.
  • ತಳದಲ್ಲಿ ಕೂತಿರುವ ಅಕ್ಕಿ ತೊಳೆದ ನೀರಿನ ಪೇಸ್ಟ್ ಅನ್ನು ಹತ್ತಿಯ ಸಹಾಯದಿಂದ ಕಣ್ಣು ಮುಚ್ಚಿ ರೆಪ್ಪೆಯ ಮೇಲಿಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ.
  • ಅಕ್ಕಿ ತೊಳೆದು ನೀರಿಗೆ ಜೇನು ಹಾಕಿ ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಮಕ್ಕಳಿಗೆ ತುಂಬಾ ಒಳ್ಳೆಯದು.
  • ಅಕ್ಕಿ ತೊಳೆದ ಪೇಸ್ಟನ್ನು ಸುಟ್ಟ ಗಾಯದ ಮೇಲೆಹಚ್ಚಿದರೆ ಬೊಬ್ಬೆ ಬರುವುದಿಲ್ಲ ಗಾಯ ಬೇಗನೆ ವಾಸಿಯಾಗುತ್ತದೆ.
  • ಅಕ್ಕಿ ತೊಳೆದ ನೀರಿನಲ್ಲಿ ಹುತ್ತದ ಮಣ್ಣು ಸೇರಿಸಿ ಕಾಲಿಗೆ ಮಸಾಜ್ ಮಾಡುವುದರಿಂದ ಮಕ್ಕಳ ಎಳಸು ಗುಣವಾಗಿ ಕಾಲು ಗಟ್ಟಿಯಾಗುತ್ತದೆ ಇದರಿಂದ ಬೇಗನೆ ನಡೆಯುವುದನ್ನು ಕಲಿಯುತ್ತಾರೆ.
  • ಈ ಮೇಲಿನ ಔಷಧಿಯನ್ನು ಬಾಣಂತಿ ಹೊಟ್ಟೆಗೆ ಹಚ್ಚುವುದರಿಂದ ಹೊಟ್ಟೆ ಬೇಗನೆ ಮೊದಲಿನ ಸ್ಥಿತಿಗೆ ಬರುತ್ತದೆ.
ಬರಹ :
ಸುಮನಾ ಮಳಲಗದ್ದೆ, ಪಾರಂಪರಿಕ ವೈದ್ಯರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

3 minutes ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

6 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

13 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

13 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

13 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

23 hours ago