Advertisement
Opinion

ಅಕ್ಕಿ ತೊಳೆದ ನೀರನ್ನು ಚೆಲ್ಲದಿರಿ | ಕಲಗಚ್ಚುವಿನಲ್ಲಿದೆ ಅನೇಕ ಔಷಧಿಯ ಗುಣಗಳು

Share

ಅಕ್ಕಿ ತೊಳೆದ ನೀರು (ಕಲಗಚ್ಚು)( rice washed water)ನಲ್ಲಿ ತುಂಬಾ ಒಳ್ಳೆಯ ಔಷಧೀಯ ಗುಣ ಇದೆ. ಕಲಗಚ್ಚು ಎಂದು ಮೂಗು ಮುರಿಯುವ ಅಗತ್ಯ ಇಲ್ಲ. ಅಕ್ಕಿ ಎಂದರೆ ಬಿಳಿ ಅಕ್ಕಿ ಅಲ್ಲ, ಕೆಂಪಕ್ಕಿ(red rice) ಸಿಪ್ಪೆ ರಹಿತವಾಗಿ ಇರುವುದು ಅಲ್ಲ, ಸಿಪ್ಪೆ ಸಹಿತವಾಗಿ ಇರಬೇಕಾಗುತ್ತದೆ. ಅಕ್ಕಿಯನ್ನು ಮೊದಲು ಸಾಮಾನ್ಯ ನೀರಿನಲ್ಲಿ ತೊಳೆದುಬಿಡಿ. ಧೂಳುಗಳು ಹೋಗಿರುವುದು ಖಾತ್ರಿ ಮಾಡಿಕೊಳ್ಳಿ ನಂತರ ಮತ್ತೆ ನೀರು ಹಾಕಿ ಐದು ನಿಮಿಷ ಇಡಿ. ಚೆನ್ನಾಗಿ ತಿಕ್ಕಿ ತೊಳೆಯಿರಿ. ನೀರು ಬಗ್ಗಿಸಿದ ಅಕ್ಕಿಯನ್ನು ಅನ್ನವಾಗಿ ಮಾಡಿಕೊಳ್ಳಿ.

ಅಕ್ಕಿ ತೊಳೆದ ನೀರಿನಲ್ಲಿ ಏನೇನು ಇದೆ ಪ್ರಯೋಜನ:

  • ತೆಗೆದಿಟ್ಟ ನೀರನ್ನು ಬಿಳಿಯ ಬಟ್ಟೆಯಲ್ಲಿ ಸೋಸಿ ಒಂದು ಕಡೆ ಇಡಿ. ಅರ್ಧ ಗಂಟೆ ಬಿಟ್ಟಾಗ ತಳದಲ್ಲಿ ಬಿಳಿಯ ಬಣ್ಣದ ಹಿಟ್ಟು ನಿಂತಿರುತ್ತದೆ. ಅರಿಶಿಣ ಸ್ವಲ್ಪ ಸೇರಿಸಿ ಮುಖಕ್ಕೆ ಹಚ್ಚಿ. ಕೆಲವರಿಗೆ ಅರಿಶಿನ ಆಗುವುದಿಲ್ಲ ಅಂತವರಿಗೆ ಅರಿಶಿನದ ಬಳಕೆ ಬೇಡ.
  • ಅಕ್ಕಿ ತೊಳೆದ ನೀರಿನಿಂದ ಕಾಳುಮೆಣಸು ತೇದು ಹಚ್ಚುವುದರಿಂದ ಮೊಡವೆ ಗುಣವಾಗುತ್ತದೆ. ಇದನ್ನು ಚೆನ್ನಾಗಿ ಮಸಾಜ್ ಮಾಡಿ ಮುಂಗೈ ಮೊಣಕಾಲಿನ ಕೆಳಭಾಗ ಮುಖ ಕುತ್ತಿಗೆ ಕಿವಿಯ ಹಿಂಭಾಗ ಎಲ್ಲಾ ಕಡೆ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಮುಖದ ಕಾಂತಿ ಹೆಚ್ಚುತ್ತದೆ ಮತ್ತು ಮೊಣಕೈಯಲ್ಲಿರುವ ಸಣ್ಣ ಗುಳ್ಳೆ ಗಳು ಗುಣವಾಗುತ್ತದೆ.
  • ಅಕ್ಕಿ ತೊಳೆದ ನೀರನ್ನು ನಿಂಬೆ ರಸದೊಂದಿಗೆ ತಲೆಯ ಸ್ನಾನದ ಮೊದಲು ಕೂದಲಿಗೆ ಹಚ್ಚಿ ಒಣಗಿಸಿ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ನಯವಾಗಿ ಬೆಳೆಯುತ್ತದೆ. ಅಕ್ಕಿ ತೊಳೆದ ನೀರಿನಲ್ಲಿ ಹಿಮ್ಮಡಿಯನ್ನು ಮೃದುವಾಗಿ ಮಸಾಜ್ ಮಾಡುವುದರಿಂದ ಹಿಮ್ಮಡಿ ಒಡೆದಿರುವುದು ಗುಣವಾಗುತ್ತದೆ.
  • ಅಕ್ಕಿ ತೊಳೆದ ನೀರಿಗೆ ಕೆಂಪು ಕಲ್ಲು ಸಕ್ಕರೆ ಚೂರು ಏಲಕ್ಕಿ ಪುಡಿ ಅಗತ್ಯ ಇದ್ದಷ್ಟು ನೀರು ಹಾಕಿ ಜ್ಯೂಸ್ ಮಾಡಿ ಕುಡಿದರೆ ಕ್ಯಾಲ್ಸಿಯಂ ಹೆಚ್ಚುತ್ತದೆ ಮತ್ತು ದೇಹ ತಂಪಾಗುತ್ತದೆ.
  • ತಳದಲ್ಲಿ ಕೂತಿರುವ ಅಕ್ಕಿ ತೊಳೆದ ನೀರಿನ ಪೇಸ್ಟ್ ಅನ್ನು ಹತ್ತಿಯ ಸಹಾಯದಿಂದ ಕಣ್ಣು ಮುಚ್ಚಿ ರೆಪ್ಪೆಯ ಮೇಲಿಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ.
  • ಅಕ್ಕಿ ತೊಳೆದು ನೀರಿಗೆ ಜೇನು ಹಾಕಿ ಸೇವಿಸುವುದರಿಂದ ಶಕ್ತಿ ಹೆಚ್ಚುತ್ತದೆ ಮಕ್ಕಳಿಗೆ ತುಂಬಾ ಒಳ್ಳೆಯದು.
  • ಅಕ್ಕಿ ತೊಳೆದ ಪೇಸ್ಟನ್ನು ಸುಟ್ಟ ಗಾಯದ ಮೇಲೆಹಚ್ಚಿದರೆ ಬೊಬ್ಬೆ ಬರುವುದಿಲ್ಲ ಗಾಯ ಬೇಗನೆ ವಾಸಿಯಾಗುತ್ತದೆ.
  • ಅಕ್ಕಿ ತೊಳೆದ ನೀರಿನಲ್ಲಿ ಹುತ್ತದ ಮಣ್ಣು ಸೇರಿಸಿ ಕಾಲಿಗೆ ಮಸಾಜ್ ಮಾಡುವುದರಿಂದ ಮಕ್ಕಳ ಎಳಸು ಗುಣವಾಗಿ ಕಾಲು ಗಟ್ಟಿಯಾಗುತ್ತದೆ ಇದರಿಂದ ಬೇಗನೆ ನಡೆಯುವುದನ್ನು ಕಲಿಯುತ್ತಾರೆ.
  • ಈ ಮೇಲಿನ ಔಷಧಿಯನ್ನು ಬಾಣಂತಿ ಹೊಟ್ಟೆಗೆ ಹಚ್ಚುವುದರಿಂದ ಹೊಟ್ಟೆ ಬೇಗನೆ ಮೊದಲಿನ ಸ್ಥಿತಿಗೆ ಬರುತ್ತದೆ.
ಬರಹ :
ಸುಮನಾ ಮಳಲಗದ್ದೆ, ಪಾರಂಪರಿಕ ವೈದ್ಯರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago