ನಮ್ಮ ಸ್ವಾರ್ಥಕ್ಕಾಗಿ ಭೂಮಿಯ ಮೇಲಿನ ಕಳೆಯನ್ನು ನಾಶಪಡಿಸುವ ಹಕ್ಕು ನಮಗಿದೆಯೇ.? ಕಳೆನಾಶಕ ಬಳಸೋದು ನಿಲ್ಲಿಸಿ..

July 26, 2023
9:47 PM
ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಈ ಬಗ್ಗೆ ಮಾಹಿತಿ ಇಲ್ಲಿದೆ...

ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.

ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ ಇಂದು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು. ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.

Source: Whats App – ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror