ನಮ್ಮ ಸ್ವಾರ್ಥಕ್ಕಾಗಿ ಭೂಮಿಯ ಮೇಲಿನ ಕಳೆಯನ್ನು ನಾಶಪಡಿಸುವ ಹಕ್ಕು ನಮಗಿದೆಯೇ.? ಕಳೆನಾಶಕ ಬಳಸೋದು ನಿಲ್ಲಿಸಿ..

July 26, 2023
9:47 PM
ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಈ ಬಗ್ಗೆ ಮಾಹಿತಿ ಇಲ್ಲಿದೆ...

ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

Advertisement
Advertisement

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

Advertisement

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.

ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ ಇಂದು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು. ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.

Advertisement

Source: Whats App – ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror