Opinion

ನಮ್ಮ ಸ್ವಾರ್ಥಕ್ಕಾಗಿ ಭೂಮಿಯ ಮೇಲಿನ ಕಳೆಯನ್ನು ನಾಶಪಡಿಸುವ ಹಕ್ಕು ನಮಗಿದೆಯೇ.? ಕಳೆನಾಶಕ ಬಳಸೋದು ನಿಲ್ಲಿಸಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

Advertisement
Advertisement

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.

ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ ಇಂದು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು. ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.

Source: Whats App – ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

43 minutes ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

19 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

19 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

19 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

20 hours ago