Advertisement
Opinion

ನಮ್ಮ ಸ್ವಾರ್ಥಕ್ಕಾಗಿ ಭೂಮಿಯ ಮೇಲಿನ ಕಳೆಯನ್ನು ನಾಶಪಡಿಸುವ ಹಕ್ಕು ನಮಗಿದೆಯೇ.? ಕಳೆನಾಶಕ ಬಳಸೋದು ನಿಲ್ಲಿಸಿ..

Share

ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

Advertisement

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.

ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ ಇಂದು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು. ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.

Source: Whats App – ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

2 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

18 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

19 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

19 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

19 hours ago