Advertisement
Opinion

ನಮ್ಮ ಸ್ವಾರ್ಥಕ್ಕಾಗಿ ಭೂಮಿಯ ಮೇಲಿನ ಕಳೆಯನ್ನು ನಾಶಪಡಿಸುವ ಹಕ್ಕು ನಮಗಿದೆಯೇ.? ಕಳೆನಾಶಕ ಬಳಸೋದು ನಿಲ್ಲಿಸಿ..

Share

ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು.

ಒಂದೇ ಮಣ್ಣು, ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸಾವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ.

ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.

ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ ಕತ್ತರಿಸಿ. ಬುಡ ಸಮೇತ ಕಿತ್ತು ಹಾಕುವುದು ಬೇಡ. ಪಾರ್ಕ್ ಗಳಲ್ಲಿ ಇರುವಂತೆ ಇಂದು ಕಳೆ ಉಳಿಯಲು ಬಿಡಿ. ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ. ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ. ತೋಟದ ಇಳುವರಿಯನ್ನು ಹೆಚ್ಚಿಸುವುದು. ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.

Source: Whats App – ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

52 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

1 hour ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago