ಅಡಿಕೆ ಕೃಷಿ ವಿಸ್ತರಣೆಯ ಆತಂಕ ಏನು…? | ಕೃಷಿ ವಿಸ್ತರಣೆಗೆ ಬ್ರೇಕ್‌ ಏಕೆ ಬೇಕು…? |

October 21, 2024
8:11 PM
ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ

ಇತ್ತೀಚಿನ ದಿನಗಳಲ್ಲಿ ವ್ಯವಸ್ಥಿತವಾದ ಅಡಿಕೆ ತೋಟ ವಿಸ್ತರಣೆಯ ಸುಂದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹಳವಾಗಿ ಪ್ರಚಾರಕ್ಕೆ ಬರುತ್ತಿದೆ. ಅಲ್ಲಿನ ನೀರಿನ ಟ್ಯಾಂಕಿಯ ವ್ಯವಸ್ಥೆ, ಮಾರ್ಗದ ವ್ಯವಸ್ಥೆ, ನೀರು ಹರಿದು ಹೋಗುವ ವ್ಯವಸ್ಥೆ, ಮೈಸೂರು ಪಾಕಿನ ತುಂಡುಗಳಂತೆ ಅಡಿಕೆಯ ಗುಂಡಿಗಳು, ಕೋಟ್ಯಾಧಿಕ ಲೀಟರಿನ ನೀರ ಹೊಂಡಗಳು, ಮನೆಯ ಮಂಚದಲ್ಲಿ ಮಲಗಿದ್ದಲ್ಲಿಂದಲೇ ನೀರಾವರಿ ಮಾಡುವ ಸ್ವಯಂ ಚಾಲಿತ ವ್ಯವಸ್ಥೆ ಎಲ್ಲವೂ ಬಲು ಆಕರ್ಷಣೀಯ. ಹೊಸತು ಮಾಡಬೇಕೆಂಬ ಅರೆ ಮನಸ್ಸು ಇದ್ದವರಿಗೂ ಸ್ಪೂರ್ತಿ ಕೊಡುವಂತೆ ಇರುತ್ತದೆ. ಆ ಮಟ್ಟಿಗೆ ಆಧುನಿಕ ತಂತ್ರಜ್ಞಾನಕ್ಕೆ, ವ್ಯವಸ್ಥೆಗೊಳಿಸುವ ರೀತಿಗೆ ಒಂದು ನಮಸ್ಕಾರ ಸಲ್ಲಲೇ ಬೇಕು.…..ಮುಂದೆ ಓದಿ….

Advertisement
Advertisement

ಕೃಷಿ ಎಂದ ಮೇಲೆ ಒಳಿತು ಕೆಡುಕಿನ ಎರಡು ಮುಖಗಳು ಇದ್ದೇ ಇದೆ. ಒಳಿತಿನ ಮುಖವನ್ನು ಮೇಲೆ ಹೇಳಿದೆ. ನಾನೊಬ್ಬ ಕೃಷಿ ಪ್ರೇಮಿಯೂ, ಪರಿಸರ ಪ್ರೇಮಿಯೂ ಆದಕಾರಣ ಆಧುನಿಕ ಕೃಷಿ ವಿಸ್ತರಣೆಯ ಇನ್ನೊಂದು ಮುಖದತ್ತ ನನಗನಿಸಿದ ಒಂದು ಚಿಂತನೆ.

ಕೃಷಿ ಎಂಬುದು ಬದುಕಿನ ಅಗತ್ಯತೆಗಳನ್ನು ಪೂರೈಸುವ ಒಂದು ಉದ್ಯೋಗ. ಕೃಷಿ ಮಾಡುವಾಗ ಪ್ರಕೃತಿಗೂ ಹೊರೆಯಾಗದಂತೆ, ನಮ್ಮ ಆರ್ಥಿಕ ಚಟುವಟಿಕೆಗಳಿಗೂ ಕುಂದು ಉಂಟಾಗದಂತೆ, ನೀರ ಲಭ್ಯತೆಯನ್ನು ನೋಡಿಕೊಂಡು ಮಾಡುತ್ತಿದ್ದುದು ಕೃಷಿ ವಿಸ್ತರಣೆ. ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಎಂಬುದನ್ನೆಲ್ಲ ವಿಮರ್ಶಿಸಿಕೊಂಡು ಕೃಷಿ ವಿಸ್ತರಣೆ ನಡೆಯುತ್ತಿತ್ತು.

ಈ ನಿಟ್ಟಿನಲ್ಲಿ ನೋಡಿದಾಗ ಗಾಳಿಯ ಒತ್ತಡದಿಂದ ರಕ್ಷಿಸುವ, ದಕ್ಷಿಣ ದಿಕ್ಕಿನ ಬಿಸಿಲಿನ ಪೆಟ್ಟನ್ನು ಸಹಿಸಿಕೊಳ್ಳುವ, ಕೆರೆ ಮಾಡಿದಾಗ ನೀರು ಸಿಗಬಹುದು ಎಂಬ ಜಾಗ ನೋಡಿ ಅಡಿಕೆ ತೋಟದ ವಿಸ್ತರಣೆ ನಡೆಯುತ್ತಿತ್ತು. ದಕ್ಷಿಣ ದಿಕ್ಕಿನ ಭೂಮಿ ಎತ್ತರವಾಗಿ ಇರಲೇಬೇಕು ಎಂಬ ಕಡ್ಡಾಯವೇ ಇತ್ತು. ಅಂತಹ ವಿಸ್ತರಣೆ ನಡೆಯುತ್ತಿದ್ದುದು ನೂರು ಗಟ್ಟಲೆ ಗಿಡದ ಮೂಲಕ ಪರಿಸರಕ್ಕೆ ಪೂರಕವಾಗಿ.

ಆದರೆ, ಇಂದು ಹೆಚ್ಚಿನ ವಿಸ್ತರಣೆಗಳು ನಡೆಯುವುದು ತಗ್ಗು ಪ್ರದೇಶಗಳಿಗೆ ನೀರುಣಿಸುವ ಎತ್ತರದ ಬೆಟ್ಟಗಳಲ್ಲಿ. ಹುಡುಕಿದರೂ ಒಂದೇ ಒಂದು ಹಸಿರು ಕಾಣದಂತೆ ಸಂಪೂರ್ಣವಾಗಿ ಬೋಳಿಸಿ ಯಾವ ಕಾರಣಕ್ಕೂ ಅಲ್ಲಿ ಬಿಂದು ನೀರೂ ಇಂಗದಂತೆ ಮಾಡಿ, ಪ್ರಕೃತಿ ಮಾತೆ ಕೋಟ್ಯಾಂತರ ವರ್ಷಗಳಿಂದ ಇಂಗಿಸಿಕೊಟ್ಟ ನೀರನ್ನು ತೂತು ಬಾವಿಗಳ ಮೂಲಕ ಎತ್ತಿ ಟ್ಯಾಂಕುಗಳಲ್ಲಿ ತುಂಬಿಸಿ ಸಾವಿರಗಟ್ಟಲೆಯಲ್ಲಿ ಹಾಕಿದ ಅಡಿಕೆ ಗಿಡಗಳಿಗೆ ನೀರುಣಿಸಿ ಮಾಡುವ ಕೃಷಿ ಎಷ್ಟು ಸುಸ್ಥಿರ ಇರಬಹುದು? ತಂತ್ರಜ್ಞಾನದ ದುರುಪಯೋಗದ ಇನ್ನೊಂದು ಮುಖ ಅಂತ ಅನಿಸುವುದಿಲ್ಲವೇ?

Advertisement

ಕೋಟ್ಯಾಂತರ ವರ್ಷಗಳಿಂದ ಕಾಡೆಬ್ಬಿಸಿ ಭೂಮಿಯ ಸಾವಯವ ಇಂಗಾಲದ ಮಟ್ಟವನ್ನು, ಫಲವತ್ತತೆಯನ್ನು ಸಮೃದ್ಧವಾಗಿಟ್ಟ ಭೂಮಿಗೆ, ಮತ್ತೆ ಅದೇ ಜೀವಧಾರಕ ಗುಣವನ್ನು ಉಳಿಸಿಕೊಳ್ಳಲು ಇಷ್ಟೊಂದು ದೊಡ್ಡ ಪ್ರಮಾಣಕ್ಕೆ ಸಾವಯವ ಪದಾರ್ಥಗಳನ್ನು ನಮ್ಮಲ್ಲಿಯೇ ಉತ್ಪತ್ತಿ ಮಾಡಲು ಸಾಧ್ಯವೇ? ಎಂಬ ಪ್ರಶ್ನೆ ಮುನ್ನೆಲೆಗೆ ಬರಬೇಡವೇ ? ಹಿಂದೆ ಕೃಷಿ ನಡೆಯುತ್ತಿದ್ದುದು ದನ ಭಲದ ಮೂಲಕವಾಗಿ. ಆದರೆ ಇಂದು ದನ ಹೋಗಿ ಧನಭಲದ ಮೂಲಕಕ್ಕೆ ಪರಿವರ್ತನೆಗೊಂಡಿದೆ.

ಬೆಟ್ಟದ ನೆತ್ತಿಯಲ್ಲಿ ಕೋಟ್ಯಾಧಿಕ ಲೀಟರಿನ ನೀರಗುಂಡಿಗಳು ಕೇಂದ್ರೀಕೃತ ಭಾರದಿಂದಾಗಿ ಭೂಕುಸಿತಕ್ಕೆ ಕಾರಣವಾಗದೆ? ಈ ಸಂದರ್ಭದಲ್ಲಿ ಹಿರಿಯ ದಾರ್ಶನಿಕರೊಬ್ಬರ ಮಾತೊಂದು ನೆನಪಾಯಿತು. ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳು, ಕೃತಕ ಪೀಡೆ ಕೀಟನಾಶಕಗಳು, ಇಂದಿದ್ದ ಗುಡ್ಡಗಳನ್ನು ನಾಳೆಗೆ ಇಲ್ಲದಂತೆ ಮಾಡುವ ಬೃಹತ್ ಯಂತ್ರಗಳು ದುರ್ಯೋಧನನ ಹಿಂದಿರುವ ಕರ್ಣ, ಶಕುನಿ,ದುಶ್ಯಾಸನರಂತೆ. ದುರ್ಯೋಧನನಿಗೆ ಸಾತ್ವಿಕತೆಯನ್ನು ಎದುರಿಸುವ ನೈತಿಕತೆ ಇರಲಿಲ್ಲ. ಅವನ ಬಲವೇ ಈ ದುಷ್ಟ ತ್ರಿಮೂರ್ತಿಗಳು. ಅವರಿಲ್ಲದಿದ್ದರೆ ದುರ್ಯೋಧನ ದುಸ್ಸಾಹಸಕ್ಕೆ ಇಳಿಯುತ್ತಿರಲಿಲ್ಲ. ಅದೇ ರೀತಿ ಆಧುನಿಕ ಕೃಷಿ ಎಂಬ ಮಾತು ಬಹು ಮಾರ್ಮಿಕ.

ಮಹಾತ್ಮ ಗಾಂಧಿ ಹೇಳಿದ ಒಂದು ಮಾತು ಸಾರ್ವಕಾಲಿಕ ಸತ್ಯ. ಈ ಭೂಮಿ ನಮ್ಮ ಎಲ್ಲಾ ಅಗತ್ಯಗಳನ್ನು ಪೂರೈಸುವಷ್ಟು ಸಮರ್ಥವಾಗುಂಟು. ಆದರೆ ನಮ್ಮ ದುರಾಸೆಯನ್ನು ಪೂರೈಸಲು ಸಾಧ್ಯವಿಲ್ಲ. ಹೌದಲ್ಲವೇ!! ಕೆರೆಯಲ್ಲಿ ಸಿಗುತ್ತಿದ್ದ ನೀರು ತೂತು ಬಾವಿಗೆ ಹೋಯಿತು. ತೂತು ಬಾವಿಗಳು ಆಳ ಆಳಕ್ಕೆ ಹೋಯಿತು. ಮುಂದಿನ ಭವಿಷ್ಯದ ಪೀಳಿಗೆಗೆ ನಾವೇನು ಕೊಡಬಹುದು?

ಪ್ರಕೃತಿಯಲ್ಲಿ ನಾವು ಯಾರು? ಕಗ್ಗದ ಕವಿಯ ಮಾತನ್ನೊಮ್ಮೆ ನೆನಪಿಸಿಕೊಳ್ಳೋಣ.
ಬಿಳಲಲ್ಲ, ಬೇರಲ್ಲ,ಮುಂಡ ಕಾಂಡಗಳಲ್ಲ |
ತಳಿರಲ್ಲ, ಮಲರಲ್ಲ,ಕಾಯಿ ಹಣ್ಣಲ್ಲ||
ಎಲೆ ನೀನು, ವಿಶ್ವ ವೃಕ್ಷದೊಳ್ ಎಲೆಯಳೊಂದು ನೀಂ |
ತಿಳಿದದನು ನೆರವಾಗು ಮಂಕುತಿಮ್ಮ.

ಹೌದಲ್ಲ, ವಿಶಾಲವಾದ ಪ್ರಕೃತಿಯೆಂಬ ವೃಕ್ಷದಲ್ಲಿ ನಾವು ಕೇವಲ ಒಂದು ಎಲೆ.ಇಂದು ಚಿಗುರಿದೆ, ನಾಳೆ ಒಣಗಿ ಉದುರಿ ಹೋಗುತ್ತದೆ. ಅದನ್ನು ಯೋಚಿಸಿ ಪ್ರಕೃತಿಯೆಂಬ ಮಹಾನ್ ವೃಕ್ಷಕ್ಕೆ ಒಂದಷ್ಟು ಕೊಡುಗೆಯನ್ನು ನೀಡುವ ಯೋಚನೆ ಮಾಡೋಣ.

Advertisement
ಬರಹ :
ಎ.ಪಿ. ಸದಾಶಿವ ಮರಿಕೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಪ್ರಮುಖ ಸುದ್ದಿ

MIRROR FOCUS

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!
May 18, 2025
7:07 AM
by: ನಾ.ಕಾರಂತ ಪೆರಾಜೆ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನ ಜಾಮ್
May 17, 2025
8:00 AM
by: ದಿವ್ಯ ಮಹೇಶ್
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

OPINION

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group