Advertisement
Opinion

ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.

Share

ಚಹಾವನ್ನು(Tea) ಹೆಚ್ಚಾಗಿ ನಿದ್ರೆಯಿಂದ ಎಚ್ಚರಗೊಳಿಸಲು ಮತ್ತು ಹೊಟ್ಟೆಯನ್ನು(Stomach) ತೆರವುಗೊಳಿಸಲು ತೆಗೆದುಕೊಳ್ಳಲಾಗುತ್ತದೆ. ಬೆಳಿಗ್ಗೆಯ(Morning) ಚಹಾ ಕುಡಿಯುವ ಅಭ್ಯಾಸವನ್ನು ಬಿಡುವುದು ಕಷ್ಟ ಎಂದು ಅನೇಕ ಜನರು ಈ ದಿನಚರಿಯನ್ನು ಅನುಸರಿಸುತ್ತಾರೆ. ಅಂತಹ ಜನರು ಚಹ ಇಲ್ಲದಾಗ ತುಂಬಾ ಚಡಪಡಿಸುತ್ತಾರೆ. ಕೆಲವರಿಗಂತೂ ಹಾಸಿಗೆಯಲ್ಲಿ ಕಣ್ಣು ಬಿಡುವ ಮುಂಚೆಯೆ ಚಹಾ ಅಥವಾ ಕಾಫಿ(Coffee) ಬೇಕಾಗುತ್ತದೆ. ಬೆಳಿಗ್ಗೆ ಎದ್ದಾಗ ಚಹಾ ಅಥವಾ ಕಾಫಿಯನ್ನು ಸೇವಿಸದಿದ್ದರೆ ಹೊಟ್ಟೆಯನ್ನು ತೆರವುಗೊಳಿಸಲು ಅನೇಕರಿಗೆ ತೊಂದರೆಯಾಗುತ್ತದೆ.

Advertisement
Advertisement
Advertisement
Advertisement

ನೀವೂ ಇದರಿಂದ ಬಳಲುತ್ತಿದ್ದರೆ. ನಿಮ್ಮ ಹೊಟ್ಟೆಯ ಆರೋಗ್ಯ ಚೆನ್ನಾಗಿಲ್ಲ. ನೀವು ಸಮಯಕ್ಕೆ ಗಮನಿಸಬೇಕು. ಏಕೆಂದರೆ, ಹೊಟ್ಟೆಯನ್ನು ಶುಚಿಗೊಳಿಸುವುದು ನೈಸರ್ಗಿಕ ಪ್ರಕ್ರಿಯೆ ಮತ್ತು ಇದು ಯಾವುದೇ ಅಭ್ಯಾಸದೊಂದಿಗೆ ಸಂಬಂಧಿಸಬಾರದು ಎಂದು ಆಹಾರ ತಜ್ಞರ ಹಾಗೂ ವೈದ್ಯರ ಅಭಿಪ್ರಾಯ. ನೀವು ಸಹ ಅಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಸಮಯಕ್ಕೆ ಸರಿಯಾಗಿ ಸಮಸ್ಯೆ ಏನೆಂದು ನೀವು ಅರಿತುಕೊಳ್ಳಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಇದು ಪಿತ್ತ ಮತ್ತು ಅಜೀರ್ಣವನ್ನು ಹೆಚ್ಚಿಸುತ್ತದೆ. ವಾಯುವಿನ ಸಮಸ್ಯೆಯಿಂದ ಹೊಟ್ಟೆ ಉಬ್ಬರ ಇರುತ್ತದೆ. ಇದು ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯ್ಡ್ ಇತ್ಯಾದಿಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

Advertisement

ಕಡಿಮೆ ಪ್ರಮಾಣದ ನೀರು : ಕಡಿಮೆ ನೀರು ಕುಡಿಯುವುದರಿಂದ ದೇಹದಲ್ಲಿ ಶುಷ್ಕತೆ ಉಂಟಾಗುತ್ತದೆ . ಆದ್ದರಿಂದ, ಆಹಾರದಲ್ಲಿ ನೀರು ಮತ್ತು ದ್ರವದ ಪ್ರಮಾಣವು ಸೂಕ್ತವಾಗಿರಬೇಕು. ಚಳಿಯ ದಿನಗಳಲ್ಲಿ ತಂಪು ಹವಾಮಾನದಿಂದಾಗಿ ಬಾಯಾರಿಕೆ ಕಡಿಮೆ ಆಗುವುದರಿಂದ ಮಲಬದ್ಧತೆ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚು. ಆದರೆ, ಈ ಸಮಸ್ಯೆಯನ್ನು ತಪ್ಪಿಸಲು ಆರೋಗ್ಯಕ್ಕಾಗಿ ಯಾವಾಗಲೂ ಹೆಚ್ಚು ನೀರು ಕುಡಿಯುವುದು ಉತ್ತಮ.

ಆಹಾರದಲ್ಲಿ ಅಧಿಕ ಸಂಸ್ಕರಿತ ಪದಾರ್ಥಗಳು: ಆಹಾರದಲ್ಲಿ ಸಾಕಷ್ಟು ಸಂಸ್ಕರಿಸಿದ ಆಹಾರವಿದ್ದರೂ, ಹೊಟ್ಟೆಯನ್ನು ಸ್ವಚ್ಛಗೊಳಿಸುವಲ್ಲಿ ತೊಂದರೆಗಳಿವೆ. ಏಕೆಂದರೆ ಸಂಸ್ಕರಿಸಿದ ಆಹಾರಗಳಲ್ಲಿ ಹಿಟ್ಟು ಮತ್ತು ಸಕ್ಕರೆ ಅಧಿಕವಾಗಿರುತ್ತದೆ. ಇಂತಹ ಆಹಾರಗಳಲ್ಲಿ ನಾರಿನಂಶ ತುಂಬಾ ಕಡಿಮೆ ಇರುತ್ತದೆ. ಇದರಿಂದ ಮಲಬದ್ಧತೆ ಉಂಟಾಗುತ್ತದೆ. ಆದ್ದರಿಂದ, ಕರುಳು ಸರಿಯಾಗಿ ಸ್ವಚ್ಛವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ, ಹೆಚ್ಚು ನಾರಿನಂಶ ಇರುವ ಆಹಾರಗಳು ಅಂದರೆ ಪಾಲಿಷ್ ಮಾಡಿರದ ಧಾನ್ಯಗಳು, ಮೊಳಕೆ ಬರಿಸಿದ ಕಾಳುಗಳು, ಬೀಜಗಳು, ಹಣ್ಣುಗಳು, ತರಕಾರಿಗಳ ಸೇರ್ಪಡೆಯನ್ನು ಹೆಚ್ಚಿಸಬೇಕು. ಇದು ಹೊಟ್ಟೆಯನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ.

Advertisement

ದೈಹಿಕ ಚಟುವಟಿಕೆಗಳ ಕೊರತೆ : ದಿನವಿಡೀ ಸಾಕಷ್ಟು ದೈಹಿಕ ಚಟುವಟಿಕೆಗಳು ಇಲ್ಲದೆ ಹೆಚ್ಚು ಹೊತ್ತು ಕುಳಿತುಕೊಂಡು ಅಥವಾ ಮಲಗಿಕೊಂಡು ಇದ್ದರೆ ಇದು ಕರುಳಿನ ಚಲನೆಯನ್ನು ಮಂದಗೊಳಿಸುತ್ತದೆ. ಕೆಲಸದ ಭರಾಟೆಯಲ್ಲಿ ನಾವು ಆಗಾಗ ಎದ್ದು ಓಡಾಡುವುದಿಲ್ಲ. ಇದರಿಂದ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಆದ್ದರಿಂದ, ಪ್ರತಿ ಅರ್ಧ ಅಥವಾ ಮುಕ್ಕಾಲು ಗಂಟೆಗೆ ದೇಹದ ಕನಿಷ್ಠ ಚಲನೆಯನ್ನು ಮಾಡಿಬೇಕು. ಇಷ್ಟೇ ಅಲ್ಲ, ಬೆಳಗ್ಗೆ ಅಥವಾ ಸಂಜೆಯ ನಡಿಗೆ, ಯೋಗದಂತಹ ವ್ಯಾಯಾಮವನ್ನಾದರೂ ಮಾಡಬೇಕು.

ಚಹಾ ಕಾಫಿಯ ಅಭ್ಯಾಸವನ್ನು ತೊಡೆದುಹಾಕಲು ಪ್ರತಿದಿನ ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ಇದು ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುವುದು ಮಾತ್ರವಲ್ಲದೆ, ದೇಹದ ಜಲಸಂಚಯನವನ್ನು ಸುಧಾರಿಸುತ್ತದೆ ಮತ್ತು ಇತರ ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ.

Advertisement

ಸಂಕಲನ ಮತ್ತು ಸಂಪಾದನೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

8 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

23 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago