Opinion

ಕಣಜಗಳ ನೈಸರ್ಗಿಕ ನಿಯಂತ್ರಣ ನಿಮಗೆ ಗೊತ್ತೆ? | ಇದು ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಣಜ, ಆನೆ ಕಡಜಿರ, ಹಾರ್ನೆಟ್ ಎಂದೆಲ್ಲಾ ಕರೆವ ಇವು ಸಂಘ ಜೀವಿ, ಇದರ ಗೂಡನ್ನು ಕಂಡರಂತೂ ಭಯಗೊಂಡು ಗೂಡಿನತ್ತ ಸುಳಿಯದೆ ದೂರ ಹೋಗುತ್ತಾರೆ. ಕಾರಣ ಇದರ ಕಡಿತ ವಿಪರೀತ ಉರಿ ನೋವು ಸೆಳೆತಗಳಿಂದ ಕೂಡಿರುತ್ತದೆ ಇದರ ಹಿಂಬಾಗದ ಕೊಂಡಿಯಿಂದ ವಿಷ ಚುಚ್ಚಿದರೆ ಮುಗಿಯಿತು ಗಂಟೆಗಟ್ಟಲೆನೋವನ್ನು ತಾಳಲು ರೆಡಿ ಆಗಬೇಕು. ಇಂತಹ ಕಣಜಗಳ ಗೂಡುಗಳು ಮನೆ ಹೊಲಗಳ ಅಕ್ಕ ಪಕ್ಕ ಎಲ್ಲಿಯೇ ಕಂಡುಬಂದರೂ ಮೊದಲು ಅವುಗಳನ್ನು ನಮ್ಮಲ್ಲಿ ಬೆಂಕಿಯಿಂದ ಸುಟ್ಟು ಹಾಕುತ್ತಾರೆ.

Advertisement
Advertisement

ಕಣಜಗಳು ಇತರ ಕೀಟ ಹಾಗು ಲಾರ್ವಾಗಳನ್ನು ಭಕ್ಷಣೆ ಮಾಡುವುದರ ಮೂಲಕ ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತದೆ, ಕೆಲ ದೇಶಗಳಲ್ಲಿ ಇವುಗಳ ಗೂಡಿನಿಂದ ಸಾಂಪ್ರದಾಯಕ ಔಷಧಿ ತಯಾರಿಸುತ್ತಾರೆ ಎಂಬ ಪ್ರತೀತಿ ಇದೆ, ಇದರ ವಿಷವನ್ನು ಔಷಧಿ ತಯಾರಿಕೆಯಲ್ಲಿ ಬಳಸಬಹುದೇ ಎಂದು ಸಂಶೋಧನೆಗಳು ನಡೆಯುತ್ತಿವೆ. ಕಣಜಗಳ ಗೂಡುಗಳು ಮನೆ ಅಕ್ಕಪಕ್ಕ ಇದ್ದರೆ ಹೊಗೆ ಹಾಕಿ ಓಡಿಸಿ ಇಲ್ಲವೆ ರಾತ್ರಿ ವೇಳೆ ಗೂಡನ್ನು ಚೀಲಗಳಲ್ಲಿ ತುಂಬಿ ಬೇರೆಡೆ ಸಾಗಿಸಿ, ಇಲ್ಲವೆ ರಸಾಯನಿಕಗಳನ್ನು ಸಿಂಪಡಿಸಿ ಹುಳುಗಳ ಸಮೇತ ಗೂಡನ್ನು ನಾಶ ಮಾಡಿ ಎಂಬ ಮಾಹಿತಿ ಎಲ್ಲಾ ಕಡೆ ಸಿಗುತ್ತದೆ, ಆದರೆ ಕೆಲವು ಸಸ್ಯಗಳನ್ನು ಬಳಸಿ ಈ ಕಣಜಗಳನ್ನು ನೈಸರ್ಗಿಕವಾಗಿ ಹೇಗೆ ಓಡಿಸಬಹುದು ಎಂಬ ವಿಧಾನ ನೋಡೋಣ.

ಕೆಲ ಸಸ್ಯಗಳು ಕಣಜಗಳ ನೈಸರ್ಗಿಕ ಪ್ರತಿರೋದಕಗಳಾಗಿವೆ, ಅವುಗಳಲ್ಲಿ ನಮ್ಮಲ್ಲಿ ಬೆಳೆವ ಮುಳ್ಳು ಕೆಂಜಿಗೆ ,ಈಜಿ ಮುಳ್ಳು ಕೆಂಚಿಗೆ, ಕೊಮ್ಮೆ ಎಂದೆಲ್ಲಾ ಕರೆವ ಇದರ ಇಂಗ್ಲೀಷ್ ಹೆಸರು Hultholia mimosoides. ಈ ಮುಳ್ಳು ಗಿಡದ ಸೊಪ್ಪನ್ನು ತಂದು ರಾತ್ರಿ ವೇಳೆ (ರಾತ್ರಿ ವೇಳೆ ಕಣಜಗಳ ಚಟುವಟಿಕೆ ಇರುವುದಿಲ್ಲ) ಗೂಡಿನ ಸಮೀಪ ಇಟ್ಟರೆ ನಿಮ್ಮ ಕೆಲಸ ಮುಗಿಯಿತು 15-20 ದಿನಗಳಲ್ಲಿ ಕಣಜಗಳು ತಮ್ಮ ಗೂಡಿನಲ್ಲಿರುವ ಮೊಟ್ಟೆ ಲಾರ್ವಾಗಳನ್ನು ಬೆಳೆಸಿಕೊಂಡು ಪಲಾಯನ ಮಾಡುತ್ತವೆ. ಹಾಗೇಯೇ ದೊಡ್ಡ ಪತ್ರೆ, ನಿಂಬೆ ಹುಲ್ಲು. ಇವು ಕೂಡ ಕಣಜಗಗಳ ನೈಸರ್ಗಿಕ ಪ್ರತಿರೋಧಕಗಳಾಗಿವೆ, ಇವುಗಳನ್ನು ಮನೆಯ ಅಕ್ಕ ಪಕ್ಕ ಬೆಳೆಸುವುದರಿಂದ ಕಣಜಗಳು ಗೂಡು ನಿರ್ಮಿಸದಂತೆ ತಡೆಯಬಹುದು. ಈ ಕಣಜಗಳ ಪೀಡನೆ ಹೆಚ್ಚುವುದಕ್ಕೆ ನಿಸರ್ಗದ ಏರುಪೇರುಗಳೆ ಕಾರಣ ಇರಬಹುದು, ಇದರ ಬಗೆಗೆ ಮಾಹಿತಿ ಎಲ್ಲಿಯೂ ಸಿಗುತ್ತಿಲ್ಲ ಒಟ್ಟಿನಲ್ಲಿ ಇವುಗಳ ಗೂಡನ್ನು ಕಂಡ ಕಂಡಲ್ಲಿ ಸುಟ್ಟು ಹಾಕದೆ ನೈಸರ್ಗಿಕವಾಗಿ ಓಡಿಸುವ ಪ್ರಯತ್ನ ಮಾಡೋಣ.

ಬರಹ :
ನಾಗರಾಜ್ ಬೆಳ್ಳೂರು

(ವ್ಯಾಟ್ಸಪ್‌ ಮೂಲಕ)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

47 minutes ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

1 hour ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

1 hour ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

2 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

10 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

10 hours ago