Advertisement
Opinion

ಕಣಜಗಳ ನೈಸರ್ಗಿಕ ನಿಯಂತ್ರಣ ನಿಮಗೆ ಗೊತ್ತೆ? | ಇದು ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತೆ |

Share

ಕಣಜ, ಆನೆ ಕಡಜಿರ, ಹಾರ್ನೆಟ್ ಎಂದೆಲ್ಲಾ ಕರೆವ ಇವು ಸಂಘ ಜೀವಿ, ಇದರ ಗೂಡನ್ನು ಕಂಡರಂತೂ ಭಯಗೊಂಡು ಗೂಡಿನತ್ತ ಸುಳಿಯದೆ ದೂರ ಹೋಗುತ್ತಾರೆ. ಕಾರಣ ಇದರ ಕಡಿತ ವಿಪರೀತ ಉರಿ ನೋವು ಸೆಳೆತಗಳಿಂದ ಕೂಡಿರುತ್ತದೆ ಇದರ ಹಿಂಬಾಗದ ಕೊಂಡಿಯಿಂದ ವಿಷ ಚುಚ್ಚಿದರೆ ಮುಗಿಯಿತು ಗಂಟೆಗಟ್ಟಲೆನೋವನ್ನು ತಾಳಲು ರೆಡಿ ಆಗಬೇಕು. ಇಂತಹ ಕಣಜಗಳ ಗೂಡುಗಳು ಮನೆ ಹೊಲಗಳ ಅಕ್ಕ ಪಕ್ಕ ಎಲ್ಲಿಯೇ ಕಂಡುಬಂದರೂ ಮೊದಲು ಅವುಗಳನ್ನು ನಮ್ಮಲ್ಲಿ ಬೆಂಕಿಯಿಂದ ಸುಟ್ಟು ಹಾಕುತ್ತಾರೆ.

ಕಣಜಗಳು ಇತರ ಕೀಟ ಹಾಗು ಲಾರ್ವಾಗಳನ್ನು ಭಕ್ಷಣೆ ಮಾಡುವುದರ ಮೂಲಕ ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತದೆ, ಕೆಲ ದೇಶಗಳಲ್ಲಿ ಇವುಗಳ ಗೂಡಿನಿಂದ ಸಾಂಪ್ರದಾಯಕ ಔಷಧಿ ತಯಾರಿಸುತ್ತಾರೆ ಎಂಬ ಪ್ರತೀತಿ ಇದೆ, ಇದರ ವಿಷವನ್ನು ಔಷಧಿ ತಯಾರಿಕೆಯಲ್ಲಿ ಬಳಸಬಹುದೇ ಎಂದು ಸಂಶೋಧನೆಗಳು ನಡೆಯುತ್ತಿವೆ. ಕಣಜಗಳ ಗೂಡುಗಳು ಮನೆ ಅಕ್ಕಪಕ್ಕ ಇದ್ದರೆ ಹೊಗೆ ಹಾಕಿ ಓಡಿಸಿ ಇಲ್ಲವೆ ರಾತ್ರಿ ವೇಳೆ ಗೂಡನ್ನು ಚೀಲಗಳಲ್ಲಿ ತುಂಬಿ ಬೇರೆಡೆ ಸಾಗಿಸಿ, ಇಲ್ಲವೆ ರಸಾಯನಿಕಗಳನ್ನು ಸಿಂಪಡಿಸಿ ಹುಳುಗಳ ಸಮೇತ ಗೂಡನ್ನು ನಾಶ ಮಾಡಿ ಎಂಬ ಮಾಹಿತಿ ಎಲ್ಲಾ ಕಡೆ ಸಿಗುತ್ತದೆ, ಆದರೆ ಕೆಲವು ಸಸ್ಯಗಳನ್ನು ಬಳಸಿ ಈ ಕಣಜಗಳನ್ನು ನೈಸರ್ಗಿಕವಾಗಿ ಹೇಗೆ ಓಡಿಸಬಹುದು ಎಂಬ ವಿಧಾನ ನೋಡೋಣ.

ಕೆಲ ಸಸ್ಯಗಳು ಕಣಜಗಳ ನೈಸರ್ಗಿಕ ಪ್ರತಿರೋದಕಗಳಾಗಿವೆ, ಅವುಗಳಲ್ಲಿ ನಮ್ಮಲ್ಲಿ ಬೆಳೆವ ಮುಳ್ಳು ಕೆಂಜಿಗೆ ,ಈಜಿ ಮುಳ್ಳು ಕೆಂಚಿಗೆ, ಕೊಮ್ಮೆ ಎಂದೆಲ್ಲಾ ಕರೆವ ಇದರ ಇಂಗ್ಲೀಷ್ ಹೆಸರು Hultholia mimosoides. ಈ ಮುಳ್ಳು ಗಿಡದ ಸೊಪ್ಪನ್ನು ತಂದು ರಾತ್ರಿ ವೇಳೆ (ರಾತ್ರಿ ವೇಳೆ ಕಣಜಗಳ ಚಟುವಟಿಕೆ ಇರುವುದಿಲ್ಲ) ಗೂಡಿನ ಸಮೀಪ ಇಟ್ಟರೆ ನಿಮ್ಮ ಕೆಲಸ ಮುಗಿಯಿತು 15-20 ದಿನಗಳಲ್ಲಿ ಕಣಜಗಳು ತಮ್ಮ ಗೂಡಿನಲ್ಲಿರುವ ಮೊಟ್ಟೆ ಲಾರ್ವಾಗಳನ್ನು ಬೆಳೆಸಿಕೊಂಡು ಪಲಾಯನ ಮಾಡುತ್ತವೆ. ಹಾಗೇಯೇ ದೊಡ್ಡ ಪತ್ರೆ, ನಿಂಬೆ ಹುಲ್ಲು. ಇವು ಕೂಡ ಕಣಜಗಗಳ ನೈಸರ್ಗಿಕ ಪ್ರತಿರೋಧಕಗಳಾಗಿವೆ, ಇವುಗಳನ್ನು ಮನೆಯ ಅಕ್ಕ ಪಕ್ಕ ಬೆಳೆಸುವುದರಿಂದ ಕಣಜಗಳು ಗೂಡು ನಿರ್ಮಿಸದಂತೆ ತಡೆಯಬಹುದು. ಈ ಕಣಜಗಳ ಪೀಡನೆ ಹೆಚ್ಚುವುದಕ್ಕೆ ನಿಸರ್ಗದ ಏರುಪೇರುಗಳೆ ಕಾರಣ ಇರಬಹುದು, ಇದರ ಬಗೆಗೆ ಮಾಹಿತಿ ಎಲ್ಲಿಯೂ ಸಿಗುತ್ತಿಲ್ಲ ಒಟ್ಟಿನಲ್ಲಿ ಇವುಗಳ ಗೂಡನ್ನು ಕಂಡ ಕಂಡಲ್ಲಿ ಸುಟ್ಟು ಹಾಕದೆ ನೈಸರ್ಗಿಕವಾಗಿ ಓಡಿಸುವ ಪ್ರಯತ್ನ ಮಾಡೋಣ.

ಬರಹ :
ನಾಗರಾಜ್ ಬೆಳ್ಳೂರು

(ವ್ಯಾಟ್ಸಪ್‌ ಮೂಲಕ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

11 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

19 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago