Advertisement
Opinion

ಕಣಜಗಳ ನೈಸರ್ಗಿಕ ನಿಯಂತ್ರಣ ನಿಮಗೆ ಗೊತ್ತೆ? | ಇದು ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತೆ |

Share

ಕಣಜ, ಆನೆ ಕಡಜಿರ, ಹಾರ್ನೆಟ್ ಎಂದೆಲ್ಲಾ ಕರೆವ ಇವು ಸಂಘ ಜೀವಿ, ಇದರ ಗೂಡನ್ನು ಕಂಡರಂತೂ ಭಯಗೊಂಡು ಗೂಡಿನತ್ತ ಸುಳಿಯದೆ ದೂರ ಹೋಗುತ್ತಾರೆ. ಕಾರಣ ಇದರ ಕಡಿತ ವಿಪರೀತ ಉರಿ ನೋವು ಸೆಳೆತಗಳಿಂದ ಕೂಡಿರುತ್ತದೆ ಇದರ ಹಿಂಬಾಗದ ಕೊಂಡಿಯಿಂದ ವಿಷ ಚುಚ್ಚಿದರೆ ಮುಗಿಯಿತು ಗಂಟೆಗಟ್ಟಲೆನೋವನ್ನು ತಾಳಲು ರೆಡಿ ಆಗಬೇಕು. ಇಂತಹ ಕಣಜಗಳ ಗೂಡುಗಳು ಮನೆ ಹೊಲಗಳ ಅಕ್ಕ ಪಕ್ಕ ಎಲ್ಲಿಯೇ ಕಂಡುಬಂದರೂ ಮೊದಲು ಅವುಗಳನ್ನು ನಮ್ಮಲ್ಲಿ ಬೆಂಕಿಯಿಂದ ಸುಟ್ಟು ಹಾಕುತ್ತಾರೆ.

ಕಣಜಗಳು ಇತರ ಕೀಟ ಹಾಗು ಲಾರ್ವಾಗಳನ್ನು ಭಕ್ಷಣೆ ಮಾಡುವುದರ ಮೂಲಕ ನೈಸರ್ಗಿಕ ಕೀಟ ನಿಯಂತ್ರಕಗಳಾಗಿ ಕೆಲಸ ಮಾಡುತ್ತದೆ, ಕೆಲ ದೇಶಗಳಲ್ಲಿ ಇವುಗಳ ಗೂಡಿನಿಂದ ಸಾಂಪ್ರದಾಯಕ ಔಷಧಿ ತಯಾರಿಸುತ್ತಾರೆ ಎಂಬ ಪ್ರತೀತಿ ಇದೆ, ಇದರ ವಿಷವನ್ನು ಔಷಧಿ ತಯಾರಿಕೆಯಲ್ಲಿ ಬಳಸಬಹುದೇ ಎಂದು ಸಂಶೋಧನೆಗಳು ನಡೆಯುತ್ತಿವೆ. ಕಣಜಗಳ ಗೂಡುಗಳು ಮನೆ ಅಕ್ಕಪಕ್ಕ ಇದ್ದರೆ ಹೊಗೆ ಹಾಕಿ ಓಡಿಸಿ ಇಲ್ಲವೆ ರಾತ್ರಿ ವೇಳೆ ಗೂಡನ್ನು ಚೀಲಗಳಲ್ಲಿ ತುಂಬಿ ಬೇರೆಡೆ ಸಾಗಿಸಿ, ಇಲ್ಲವೆ ರಸಾಯನಿಕಗಳನ್ನು ಸಿಂಪಡಿಸಿ ಹುಳುಗಳ ಸಮೇತ ಗೂಡನ್ನು ನಾಶ ಮಾಡಿ ಎಂಬ ಮಾಹಿತಿ ಎಲ್ಲಾ ಕಡೆ ಸಿಗುತ್ತದೆ, ಆದರೆ ಕೆಲವು ಸಸ್ಯಗಳನ್ನು ಬಳಸಿ ಈ ಕಣಜಗಳನ್ನು ನೈಸರ್ಗಿಕವಾಗಿ ಹೇಗೆ ಓಡಿಸಬಹುದು ಎಂಬ ವಿಧಾನ ನೋಡೋಣ.

ಕೆಲ ಸಸ್ಯಗಳು ಕಣಜಗಳ ನೈಸರ್ಗಿಕ ಪ್ರತಿರೋದಕಗಳಾಗಿವೆ, ಅವುಗಳಲ್ಲಿ ನಮ್ಮಲ್ಲಿ ಬೆಳೆವ ಮುಳ್ಳು ಕೆಂಜಿಗೆ ,ಈಜಿ ಮುಳ್ಳು ಕೆಂಚಿಗೆ, ಕೊಮ್ಮೆ ಎಂದೆಲ್ಲಾ ಕರೆವ ಇದರ ಇಂಗ್ಲೀಷ್ ಹೆಸರು Hultholia mimosoides. ಈ ಮುಳ್ಳು ಗಿಡದ ಸೊಪ್ಪನ್ನು ತಂದು ರಾತ್ರಿ ವೇಳೆ (ರಾತ್ರಿ ವೇಳೆ ಕಣಜಗಳ ಚಟುವಟಿಕೆ ಇರುವುದಿಲ್ಲ) ಗೂಡಿನ ಸಮೀಪ ಇಟ್ಟರೆ ನಿಮ್ಮ ಕೆಲಸ ಮುಗಿಯಿತು 15-20 ದಿನಗಳಲ್ಲಿ ಕಣಜಗಳು ತಮ್ಮ ಗೂಡಿನಲ್ಲಿರುವ ಮೊಟ್ಟೆ ಲಾರ್ವಾಗಳನ್ನು ಬೆಳೆಸಿಕೊಂಡು ಪಲಾಯನ ಮಾಡುತ್ತವೆ. ಹಾಗೇಯೇ ದೊಡ್ಡ ಪತ್ರೆ, ನಿಂಬೆ ಹುಲ್ಲು. ಇವು ಕೂಡ ಕಣಜಗಗಳ ನೈಸರ್ಗಿಕ ಪ್ರತಿರೋಧಕಗಳಾಗಿವೆ, ಇವುಗಳನ್ನು ಮನೆಯ ಅಕ್ಕ ಪಕ್ಕ ಬೆಳೆಸುವುದರಿಂದ ಕಣಜಗಳು ಗೂಡು ನಿರ್ಮಿಸದಂತೆ ತಡೆಯಬಹುದು. ಈ ಕಣಜಗಳ ಪೀಡನೆ ಹೆಚ್ಚುವುದಕ್ಕೆ ನಿಸರ್ಗದ ಏರುಪೇರುಗಳೆ ಕಾರಣ ಇರಬಹುದು, ಇದರ ಬಗೆಗೆ ಮಾಹಿತಿ ಎಲ್ಲಿಯೂ ಸಿಗುತ್ತಿಲ್ಲ ಒಟ್ಟಿನಲ್ಲಿ ಇವುಗಳ ಗೂಡನ್ನು ಕಂಡ ಕಂಡಲ್ಲಿ ಸುಟ್ಟು ಹಾಕದೆ ನೈಸರ್ಗಿಕವಾಗಿ ಓಡಿಸುವ ಪ್ರಯತ್ನ ಮಾಡೋಣ.

ಬರಹ :
ನಾಗರಾಜ್ ಬೆಳ್ಳೂರು

(ವ್ಯಾಟ್ಸಪ್‌ ಮೂಲಕ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

4 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

8 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

8 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

18 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago