Advertisement
ವಿಜ್ಞಾನ

#NASA | ಹಲವು ವರ್ಷಗಳ ನಿರಂತರ ಅಧ್ಯಯನದಿಂದ ವಿಜ್ಞಾನಿಗಳು ಶೋಧಿಸಿದ ವೈಜ್ಞಾನಿಕ ಸತ್ಯ..!! | ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿ ಯಾವುದು ಗೊತ್ತಾ..?

Share

#NASA ಅಮೇರಿಕಾದ ವಿಜ್ಞಾನ ಸಂಸ್ಥೆ. ಇದು ಒಂದಿಲ್ಲ ಒಂದು ಅನ್ವೇಷಣೆ, ಸಂಶೋಧನೆ ಮಾಡುತ್ತಲೇ ಇರುತ್ತದೆ. ಈ ಬಾರಿ ಜಗತ್ಪ್ರಸಿದ್ಧ ವೈಜ್ಞಾನಿಕ ಸಂಸ್ಥೆ NASA ಹಲವು ಸಂಶೋಧನೆಗಳ ನಂತರ ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿಯನ್ನು ರೆಕಾರ್ಡ್ ಮಾಡಿತ್ತು. ಆ ಧ್ವನಿಯನ್ನು ಕೇಳಿದ ವಿಜ್ಞಾನಿಗಳಿಗೆ ಅಚ್ಚರಿಯಾಗಿದೆ. ಆ ಧ್ವನಿ ಯಾವುದು ಅಂತೀರಾ..? ವೇದಗಳಲ್ಲಿ ಗುಣಗಾನ ಮಾಡಲಾಗಿರುವ, ಸನಾತನ ಧರ್ಮದ ಪವಿತ್ರ ಮಂತ್ರ  ಓಂಕಾರ…!!

Advertisement
Advertisement
Advertisement
Advertisement

ಇನ್ನೂ ಅಚ್ಚರಿಯೆಂದರೆ , ಸಾಮಾನ್ಯ ಮನುಷ್ಯ ೨೦ ಮೆಗಾ ಹರ್ಟ್ಸಿನಿಂದ ೨೦೦೦೦ ಮೆಗಾಹರ್ಟ್ಸ್ ಧ್ವನಿಯನ್ನಷ್ಟೇ ಕೇಳಬಲ್ಲ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಶಬ್ದವನ್ನು ಮನುಷ್ಯ ಗ್ರಹಿಸಲಾರ ಎಂದು ವಿಜ್ಞಾನ ತಿಳಿಸುತ್ತದೆ.ಆದರೆ ಸೂರ್ಯನಿಂದ ಬರುವ ಈ ಓಂಕಾರನಾದವನ್ನು ನಮ್ಮ ಋಷಿಮುನಿಗಳು ಅರಿತಿದ್ದಾದರೂ ಹೇಗೆ..?ವೇದಗಳಲ್ಲಿ ಕೊಂಡಾಡಿದ್ದು ಹೇಗೆ..? ಓಂಕಾರವನ್ನು ಮಹಾಮಂತ್ರವೆಂದು ಸ್ವೀಕರಿಸಿದ್ದು ಹೇಗೆ..? ಮುಂತಾದ ಪ್ರಶ್ನೆಗಳು ವಿಜ್ಞಾನಿಗಳನ್ನೂ ಕಾಡುತ್ತಿದೆ..!!

Advertisement

ನಮ್ಮ ಋಷಿಗಳ ಪ್ರಕಾರ , ಪರಮಾತ್ಮನನ್ನು ಸೇರಲು ಸುಲಭ ಸಾಧನವೆಂದರೆ ಓಂಕಾರ. ಓಂಕಾರವೇ ಪರಮಾತ್ಮನ ನಿಜವಾದ ಹೆಸರು.”ಓಮಿತ್ಯೇಕಾಕ್ಷರಂ ಬ್ರಹ್ಮ”. ಮಹರ್ಷಿ ಪತಂಜಲಿ ತಿಳಿಸುವಂತೇ “ತಸ್ಯ ವಾಚಕಃ ಪ್ರಣವಃ” ಪ್ರಣವವೆಂದರೆ “ಓಂಕಾರ”ಸೂರ್ಯನಿಂದ ಓಂಕಾರನಾದ ಬರಲು ಕಾರಣವಾದರೂ ಏನು..? ಇದಕ್ಕೆ ಉತ್ತರ ಗೀತೆಯಲ್ಲಿದೆ..

ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ: “ಅರ್ಜುನ , ನಿನಗಿಂದು ಯಾವ ವಿದ್ಯೆಯನ್ನು ನಾನು ಉಪದೇಶಿಸಿದೆನೋ ಈ ವಿದ್ಯೆಯನ್ನು ನಿನಗಿಂತಲೂ ಮೊದಲು ಸೂರ್ಯನಿಗೆ ಉಪದೇಶಿಸಿದ್ದೆ. ಅಂದಿನಿಂದ ಸೂರ್ಯ ನಿರಂತರವಾಗಿ ಓಂಕಾರವನ್ನು ಜಪಿಸುತ್ತ ಲೋಕವನ್ನು ಬೆಳಗುತ್ತಿದ್ದಾನೆ .ಕೇವಲ ಸೂರ್ಯನಷ್ಟೇ ಅಲ್ಲ. ಸಮಸ್ತ ಬ್ರಹ್ಮಾಂಡವೂ ಓಂಕಾರದಲ್ಲೇ ಅಧೀನವಾಗಿದೆ” ಅಂದರೆ ವಿಜ್ಞಾನಿಗಳು ಕಂಡುಹಿಡಿದ ಸತ್ಯ ಋಷಿ-ಮುನಿಗಳಿಗೆ , ಕೃಷ್ಣನಿಗೆ ತಿಳಿದಿತ್ತು..!! ಋಷಿಗಳು ಕೇವಲ ಕಿವಿಯಿಂದ ಕೇಳಲು ಸಾಧ್ಯವಿಲ್ಲವೆಂದಿದ್ದರು , ಧ್ಯಾನದಿಂದ ಸಾಧ್ಯವೆಂದಿದ್ದರು. ವಿಜ್ಞಾನಿಗಳು ಆಧುನಿಕ ಯಂತ್ರಗಳನ್ನು ಉಪಯೋಗಿಸಿ ಕಂಡುಹಿಡಿದಿದ್ದಾರಷ್ಟೇ…!!

Advertisement

ಯಾವಾಗ ನಾವು ಓಂ…ಎಂದು ಜೋರಾಗಿ ಉಚ್ಚರಿಸುತ್ತೇವೋ ಆಗ ನಮ್ಮ ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳು ಖಾಲಿಯಾಗುತ್ತವೆ. ಓಂಕಾರದ ಜಪ ತೀವ್ರವಾಗುತ್ತಿದ್ದಂತೇ , ಬ್ರಹ್ಮಾಂಡದಲ್ಲಿರುವ ಓಂಕಾರ ಹಾಗೂ ಸಾಧಕನ ಓಂಕಾರನಾದಗಳ ಸಮ್ಮಿಲನವಾಗುತ್ತದೆ. ಆ ಸಮಯದಲ್ಲಿ ಸಾಧಕನ ಮನಸ್ಸು ಧ್ಯಾನದಲ್ಲಿ ಕಳೆದುಹೋಗುತ್ತದೆ. ಈ ಅವಸ್ಥೆಯಲ್ಲಿ ಮನಸ್ಸು ಚೇತನದೊಂದಿಗೆ ಸೇರಿಕೊಳ್ಳುತ್ತದೆ.

Source: Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

14 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago