ವಿಜ್ಞಾನ

#NASA | ಹಲವು ವರ್ಷಗಳ ನಿರಂತರ ಅಧ್ಯಯನದಿಂದ ವಿಜ್ಞಾನಿಗಳು ಶೋಧಿಸಿದ ವೈಜ್ಞಾನಿಕ ಸತ್ಯ..!! | ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿ ಯಾವುದು ಗೊತ್ತಾ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

#NASA ಅಮೇರಿಕಾದ ವಿಜ್ಞಾನ ಸಂಸ್ಥೆ. ಇದು ಒಂದಿಲ್ಲ ಒಂದು ಅನ್ವೇಷಣೆ, ಸಂಶೋಧನೆ ಮಾಡುತ್ತಲೇ ಇರುತ್ತದೆ. ಈ ಬಾರಿ ಜಗತ್ಪ್ರಸಿದ್ಧ ವೈಜ್ಞಾನಿಕ ಸಂಸ್ಥೆ NASA ಹಲವು ಸಂಶೋಧನೆಗಳ ನಂತರ ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿಯನ್ನು ರೆಕಾರ್ಡ್ ಮಾಡಿತ್ತು. ಆ ಧ್ವನಿಯನ್ನು ಕೇಳಿದ ವಿಜ್ಞಾನಿಗಳಿಗೆ ಅಚ್ಚರಿಯಾಗಿದೆ. ಆ ಧ್ವನಿ ಯಾವುದು ಅಂತೀರಾ..? ವೇದಗಳಲ್ಲಿ ಗುಣಗಾನ ಮಾಡಲಾಗಿರುವ, ಸನಾತನ ಧರ್ಮದ ಪವಿತ್ರ ಮಂತ್ರ  ಓಂಕಾರ…!!

Advertisement
Advertisement

ಇನ್ನೂ ಅಚ್ಚರಿಯೆಂದರೆ , ಸಾಮಾನ್ಯ ಮನುಷ್ಯ ೨೦ ಮೆಗಾ ಹರ್ಟ್ಸಿನಿಂದ ೨೦೦೦೦ ಮೆಗಾಹರ್ಟ್ಸ್ ಧ್ವನಿಯನ್ನಷ್ಟೇ ಕೇಳಬಲ್ಲ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಶಬ್ದವನ್ನು ಮನುಷ್ಯ ಗ್ರಹಿಸಲಾರ ಎಂದು ವಿಜ್ಞಾನ ತಿಳಿಸುತ್ತದೆ.ಆದರೆ ಸೂರ್ಯನಿಂದ ಬರುವ ಈ ಓಂಕಾರನಾದವನ್ನು ನಮ್ಮ ಋಷಿಮುನಿಗಳು ಅರಿತಿದ್ದಾದರೂ ಹೇಗೆ..?ವೇದಗಳಲ್ಲಿ ಕೊಂಡಾಡಿದ್ದು ಹೇಗೆ..? ಓಂಕಾರವನ್ನು ಮಹಾಮಂತ್ರವೆಂದು ಸ್ವೀಕರಿಸಿದ್ದು ಹೇಗೆ..? ಮುಂತಾದ ಪ್ರಶ್ನೆಗಳು ವಿಜ್ಞಾನಿಗಳನ್ನೂ ಕಾಡುತ್ತಿದೆ..!!

ನಮ್ಮ ಋಷಿಗಳ ಪ್ರಕಾರ , ಪರಮಾತ್ಮನನ್ನು ಸೇರಲು ಸುಲಭ ಸಾಧನವೆಂದರೆ ಓಂಕಾರ. ಓಂಕಾರವೇ ಪರಮಾತ್ಮನ ನಿಜವಾದ ಹೆಸರು.”ಓಮಿತ್ಯೇಕಾಕ್ಷರಂ ಬ್ರಹ್ಮ”. ಮಹರ್ಷಿ ಪತಂಜಲಿ ತಿಳಿಸುವಂತೇ “ತಸ್ಯ ವಾಚಕಃ ಪ್ರಣವಃ” ಪ್ರಣವವೆಂದರೆ “ಓಂಕಾರ”ಸೂರ್ಯನಿಂದ ಓಂಕಾರನಾದ ಬರಲು ಕಾರಣವಾದರೂ ಏನು..? ಇದಕ್ಕೆ ಉತ್ತರ ಗೀತೆಯಲ್ಲಿದೆ..

ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ: “ಅರ್ಜುನ , ನಿನಗಿಂದು ಯಾವ ವಿದ್ಯೆಯನ್ನು ನಾನು ಉಪದೇಶಿಸಿದೆನೋ ಈ ವಿದ್ಯೆಯನ್ನು ನಿನಗಿಂತಲೂ ಮೊದಲು ಸೂರ್ಯನಿಗೆ ಉಪದೇಶಿಸಿದ್ದೆ. ಅಂದಿನಿಂದ ಸೂರ್ಯ ನಿರಂತರವಾಗಿ ಓಂಕಾರವನ್ನು ಜಪಿಸುತ್ತ ಲೋಕವನ್ನು ಬೆಳಗುತ್ತಿದ್ದಾನೆ .ಕೇವಲ ಸೂರ್ಯನಷ್ಟೇ ಅಲ್ಲ. ಸಮಸ್ತ ಬ್ರಹ್ಮಾಂಡವೂ ಓಂಕಾರದಲ್ಲೇ ಅಧೀನವಾಗಿದೆ” ಅಂದರೆ ವಿಜ್ಞಾನಿಗಳು ಕಂಡುಹಿಡಿದ ಸತ್ಯ ಋಷಿ-ಮುನಿಗಳಿಗೆ , ಕೃಷ್ಣನಿಗೆ ತಿಳಿದಿತ್ತು..!! ಋಷಿಗಳು ಕೇವಲ ಕಿವಿಯಿಂದ ಕೇಳಲು ಸಾಧ್ಯವಿಲ್ಲವೆಂದಿದ್ದರು , ಧ್ಯಾನದಿಂದ ಸಾಧ್ಯವೆಂದಿದ್ದರು. ವಿಜ್ಞಾನಿಗಳು ಆಧುನಿಕ ಯಂತ್ರಗಳನ್ನು ಉಪಯೋಗಿಸಿ ಕಂಡುಹಿಡಿದಿದ್ದಾರಷ್ಟೇ…!!

ಯಾವಾಗ ನಾವು ಓಂ…ಎಂದು ಜೋರಾಗಿ ಉಚ್ಚರಿಸುತ್ತೇವೋ ಆಗ ನಮ್ಮ ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳು ಖಾಲಿಯಾಗುತ್ತವೆ. ಓಂಕಾರದ ಜಪ ತೀವ್ರವಾಗುತ್ತಿದ್ದಂತೇ , ಬ್ರಹ್ಮಾಂಡದಲ್ಲಿರುವ ಓಂಕಾರ ಹಾಗೂ ಸಾಧಕನ ಓಂಕಾರನಾದಗಳ ಸಮ್ಮಿಲನವಾಗುತ್ತದೆ. ಆ ಸಮಯದಲ್ಲಿ ಸಾಧಕನ ಮನಸ್ಸು ಧ್ಯಾನದಲ್ಲಿ ಕಳೆದುಹೋಗುತ್ತದೆ. ಈ ಅವಸ್ಥೆಯಲ್ಲಿ ಮನಸ್ಸು ಚೇತನದೊಂದಿಗೆ ಸೇರಿಕೊಳ್ಳುತ್ತದೆ.

Advertisement

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

5 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

7 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

13 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

14 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

18 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

20 hours ago