Advertisement
ವಿಜ್ಞಾನ

#NASA | ಹಲವು ವರ್ಷಗಳ ನಿರಂತರ ಅಧ್ಯಯನದಿಂದ ವಿಜ್ಞಾನಿಗಳು ಶೋಧಿಸಿದ ವೈಜ್ಞಾನಿಕ ಸತ್ಯ..!! | ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿ ಯಾವುದು ಗೊತ್ತಾ..?

Share

#NASA ಅಮೇರಿಕಾದ ವಿಜ್ಞಾನ ಸಂಸ್ಥೆ. ಇದು ಒಂದಿಲ್ಲ ಒಂದು ಅನ್ವೇಷಣೆ, ಸಂಶೋಧನೆ ಮಾಡುತ್ತಲೇ ಇರುತ್ತದೆ. ಈ ಬಾರಿ ಜಗತ್ಪ್ರಸಿದ್ಧ ವೈಜ್ಞಾನಿಕ ಸಂಸ್ಥೆ NASA ಹಲವು ಸಂಶೋಧನೆಗಳ ನಂತರ ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿಯನ್ನು ರೆಕಾರ್ಡ್ ಮಾಡಿತ್ತು. ಆ ಧ್ವನಿಯನ್ನು ಕೇಳಿದ ವಿಜ್ಞಾನಿಗಳಿಗೆ ಅಚ್ಚರಿಯಾಗಿದೆ. ಆ ಧ್ವನಿ ಯಾವುದು ಅಂತೀರಾ..? ವೇದಗಳಲ್ಲಿ ಗುಣಗಾನ ಮಾಡಲಾಗಿರುವ, ಸನಾತನ ಧರ್ಮದ ಪವಿತ್ರ ಮಂತ್ರ  ಓಂಕಾರ…!!

ಇನ್ನೂ ಅಚ್ಚರಿಯೆಂದರೆ , ಸಾಮಾನ್ಯ ಮನುಷ್ಯ ೨೦ ಮೆಗಾ ಹರ್ಟ್ಸಿನಿಂದ ೨೦೦೦೦ ಮೆಗಾಹರ್ಟ್ಸ್ ಧ್ವನಿಯನ್ನಷ್ಟೇ ಕೇಳಬಲ್ಲ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಶಬ್ದವನ್ನು ಮನುಷ್ಯ ಗ್ರಹಿಸಲಾರ ಎಂದು ವಿಜ್ಞಾನ ತಿಳಿಸುತ್ತದೆ.ಆದರೆ ಸೂರ್ಯನಿಂದ ಬರುವ ಈ ಓಂಕಾರನಾದವನ್ನು ನಮ್ಮ ಋಷಿಮುನಿಗಳು ಅರಿತಿದ್ದಾದರೂ ಹೇಗೆ..?ವೇದಗಳಲ್ಲಿ ಕೊಂಡಾಡಿದ್ದು ಹೇಗೆ..? ಓಂಕಾರವನ್ನು ಮಹಾಮಂತ್ರವೆಂದು ಸ್ವೀಕರಿಸಿದ್ದು ಹೇಗೆ..? ಮುಂತಾದ ಪ್ರಶ್ನೆಗಳು ವಿಜ್ಞಾನಿಗಳನ್ನೂ ಕಾಡುತ್ತಿದೆ..!!

Advertisement

ನಮ್ಮ ಋಷಿಗಳ ಪ್ರಕಾರ , ಪರಮಾತ್ಮನನ್ನು ಸೇರಲು ಸುಲಭ ಸಾಧನವೆಂದರೆ ಓಂಕಾರ. ಓಂಕಾರವೇ ಪರಮಾತ್ಮನ ನಿಜವಾದ ಹೆಸರು.”ಓಮಿತ್ಯೇಕಾಕ್ಷರಂ ಬ್ರಹ್ಮ”. ಮಹರ್ಷಿ ಪತಂಜಲಿ ತಿಳಿಸುವಂತೇ “ತಸ್ಯ ವಾಚಕಃ ಪ್ರಣವಃ” ಪ್ರಣವವೆಂದರೆ “ಓಂಕಾರ”ಸೂರ್ಯನಿಂದ ಓಂಕಾರನಾದ ಬರಲು ಕಾರಣವಾದರೂ ಏನು..? ಇದಕ್ಕೆ ಉತ್ತರ ಗೀತೆಯಲ್ಲಿದೆ..

ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ: “ಅರ್ಜುನ , ನಿನಗಿಂದು ಯಾವ ವಿದ್ಯೆಯನ್ನು ನಾನು ಉಪದೇಶಿಸಿದೆನೋ ಈ ವಿದ್ಯೆಯನ್ನು ನಿನಗಿಂತಲೂ ಮೊದಲು ಸೂರ್ಯನಿಗೆ ಉಪದೇಶಿಸಿದ್ದೆ. ಅಂದಿನಿಂದ ಸೂರ್ಯ ನಿರಂತರವಾಗಿ ಓಂಕಾರವನ್ನು ಜಪಿಸುತ್ತ ಲೋಕವನ್ನು ಬೆಳಗುತ್ತಿದ್ದಾನೆ .ಕೇವಲ ಸೂರ್ಯನಷ್ಟೇ ಅಲ್ಲ. ಸಮಸ್ತ ಬ್ರಹ್ಮಾಂಡವೂ ಓಂಕಾರದಲ್ಲೇ ಅಧೀನವಾಗಿದೆ” ಅಂದರೆ ವಿಜ್ಞಾನಿಗಳು ಕಂಡುಹಿಡಿದ ಸತ್ಯ ಋಷಿ-ಮುನಿಗಳಿಗೆ , ಕೃಷ್ಣನಿಗೆ ತಿಳಿದಿತ್ತು..!! ಋಷಿಗಳು ಕೇವಲ ಕಿವಿಯಿಂದ ಕೇಳಲು ಸಾಧ್ಯವಿಲ್ಲವೆಂದಿದ್ದರು , ಧ್ಯಾನದಿಂದ ಸಾಧ್ಯವೆಂದಿದ್ದರು. ವಿಜ್ಞಾನಿಗಳು ಆಧುನಿಕ ಯಂತ್ರಗಳನ್ನು ಉಪಯೋಗಿಸಿ ಕಂಡುಹಿಡಿದಿದ್ದಾರಷ್ಟೇ…!!

Advertisement

ಯಾವಾಗ ನಾವು ಓಂ…ಎಂದು ಜೋರಾಗಿ ಉಚ್ಚರಿಸುತ್ತೇವೋ ಆಗ ನಮ್ಮ ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳು ಖಾಲಿಯಾಗುತ್ತವೆ. ಓಂಕಾರದ ಜಪ ತೀವ್ರವಾಗುತ್ತಿದ್ದಂತೇ , ಬ್ರಹ್ಮಾಂಡದಲ್ಲಿರುವ ಓಂಕಾರ ಹಾಗೂ ಸಾಧಕನ ಓಂಕಾರನಾದಗಳ ಸಮ್ಮಿಲನವಾಗುತ್ತದೆ. ಆ ಸಮಯದಲ್ಲಿ ಸಾಧಕನ ಮನಸ್ಸು ಧ್ಯಾನದಲ್ಲಿ ಕಳೆದುಹೋಗುತ್ತದೆ. ಈ ಅವಸ್ಥೆಯಲ್ಲಿ ಮನಸ್ಸು ಚೇತನದೊಂದಿಗೆ ಸೇರಿಕೊಳ್ಳುತ್ತದೆ.

Source: Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

11 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

14 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

14 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

22 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

24 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago