ಚಳಿಗಾಲದಲ್ಲಿ ಹೆಚ್ಚು ನೀರು ಕುಡಿಯಲೇ ಬೇಕು… ಯಾಕೆ ಗೊತ್ತಾ?

December 24, 2025
6:55 AM

ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹವು ರೋಗಗಳಿಗೆ ಗುರಿಯಾಗಬಹುದು ಯಾಕೆ ಗೊತ್ತಾ?. ನಮ್ಮ ದೇಹದಲ್ಲಿ ನೀರಿನಾಂಶವು ಕಡಿಮೆಯಾಗುತ್ತಿದ್ದಂತೆ ದೇಹವು ನಿರ್ಜಲೀಕರಣಕೊಳ್ಳುತ್ತದೆ. ಇದರಿಂದ ಸ್ನಾಯುಗಳ ಒತ್ತಡ, ರಕ್ತ ಪೂರೈಕೆ ಕಡಿಮೆ ಮಾಡುತ್ತದೆ ಮತ್ತು ಸ್ನಾಯುಗಳ ಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಸೋಡಿಯಂ , ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಪೋಷಣೆಯ ಕೊರತೆಯು ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.

ಈ ಚಳಿಗಾಲದಲ್ಲಿ ಎಲ್ಲರಿಗೂ ಬಾಯಾರಿಕೆ ಕಡಿಮೆ. ಇದರಿಂದ ಒಣ ಚರ್ಮ, ತುಟಿಗಳು ಒಡೆದುಹೋಗುವುದು, ತಲೆ ಭಾರವಾಗುವುದು ಮತ್ತು ಕ್ರಮೇಣ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲ ಎಲ್ಲಕ್ಕಿಂತ ಮೊದಲು ದೇಹದಲ್ಲಿರುವ ನರಗಳ ಮೇಲೆ ಹೆಚ್ಚು ಪರಿಣಾಮವನ್ನು ಬೀರುತ್ತದೆ.ದೇಹದಲ್ಲಿ ನೀರು ಕಡಿಮೆಯಾದಾಗ ನರಗಳು ತಮ್ಮ ಕೆಲಸವನ್ನು ನಿಧಾನಗೊಳಿಸುತ್ತದೆ. ಇದರಿಂದ, ರಕ್ತ ದಪ್ಪವಾಗುತ್ತದೆ, ರಕ್ತ ಪರಿಚಲನೆ ನಿಧಾನವಾಗುತ್ತದೆ. ಸ್ನಾಯುಗಳ ಒತ್ತಡ, ಬಿಗಿತ ಮತ್ತು ಕೈ ಮತ್ತು ಪಾದಗಳಲ್ಲಿ ಜುಮ್ಮೆನಿಸುವಿಕೆ ಈ ಎಲ್ಲ ಸಮಸ್ಯೆಗಳು ಬಂದೇ ಬರುತ್ತದೆ.

ಆದುರಿಂದ ಚಳಿಗಾಲ ಇರಲಿ ಬೇಸಿಗೆ ಕಾಲವಿರಲಿ ನೀರು ಕುಡಿಯುವುದನ್ನು ಕಡಿಮೆ ಮಾಡಲೇ ಬಾರದು. ಒಂದು ವೇಳೇ ಬಾಯಾರಿಕೆ ಇಲ್ಲ ಎಂದು ನೀರು ಕಡಿಮೆ ಮಾಡಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror