ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹವು ರೋಗಗಳಿಗೆ ಗುರಿಯಾಗಬಹುದು ಯಾಕೆ ಗೊತ್ತಾ?. ನಮ್ಮ ದೇಹದಲ್ಲಿ ನೀರಿನಾಂಶವು ಕಡಿಮೆಯಾಗುತ್ತಿದ್ದಂತೆ ದೇಹವು ನಿರ್ಜಲೀಕರಣಕೊಳ್ಳುತ್ತದೆ. ಇದರಿಂದ ಸ್ನಾಯುಗಳ ಒತ್ತಡ, ರಕ್ತ ಪೂರೈಕೆ ಕಡಿಮೆ ಮಾಡುತ್ತದೆ ಮತ್ತು ಸ್ನಾಯುಗಳ ಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಸೋಡಿಯಂ , ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಪೋಷಣೆಯ ಕೊರತೆಯು ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.
ಈ ಚಳಿಗಾಲದಲ್ಲಿ ಎಲ್ಲರಿಗೂ ಬಾಯಾರಿಕೆ ಕಡಿಮೆ. ಇದರಿಂದ ಒಣ ಚರ್ಮ, ತುಟಿಗಳು ಒಡೆದುಹೋಗುವುದು, ತಲೆ ಭಾರವಾಗುವುದು ಮತ್ತು ಕ್ರಮೇಣ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲ ಎಲ್ಲಕ್ಕಿಂತ ಮೊದಲು ದೇಹದಲ್ಲಿರುವ ನರಗಳ ಮೇಲೆ ಹೆಚ್ಚು ಪರಿಣಾಮವನ್ನು ಬೀರುತ್ತದೆ.ದೇಹದಲ್ಲಿ ನೀರು ಕಡಿಮೆಯಾದಾಗ ನರಗಳು ತಮ್ಮ ಕೆಲಸವನ್ನು ನಿಧಾನಗೊಳಿಸುತ್ತದೆ. ಇದರಿಂದ, ರಕ್ತ ದಪ್ಪವಾಗುತ್ತದೆ, ರಕ್ತ ಪರಿಚಲನೆ ನಿಧಾನವಾಗುತ್ತದೆ. ಸ್ನಾಯುಗಳ ಒತ್ತಡ, ಬಿಗಿತ ಮತ್ತು ಕೈ ಮತ್ತು ಪಾದಗಳಲ್ಲಿ ಜುಮ್ಮೆನಿಸುವಿಕೆ ಈ ಎಲ್ಲ ಸಮಸ್ಯೆಗಳು ಬಂದೇ ಬರುತ್ತದೆ.
ಆದುರಿಂದ ಚಳಿಗಾಲ ಇರಲಿ ಬೇಸಿಗೆ ಕಾಲವಿರಲಿ ನೀರು ಕುಡಿಯುವುದನ್ನು ಕಡಿಮೆ ಮಾಡಲೇ ಬಾರದು. ಒಂದು ವೇಳೇ ಬಾಯಾರಿಕೆ ಇಲ್ಲ ಎಂದು ನೀರು ಕಡಿಮೆ ಮಾಡಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…