Advertisement
ಸುದ್ದಿಗಳು

ಚಳಿಗಾಲದಲ್ಲಿ ಹೆಚ್ಚು ನೀರು ಕುಡಿಯಲೇ ಬೇಕು… ಯಾಕೆ ಗೊತ್ತಾ?

Share

ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹವು ರೋಗಗಳಿಗೆ ಗುರಿಯಾಗಬಹುದು ಯಾಕೆ ಗೊತ್ತಾ?. ನಮ್ಮ ದೇಹದಲ್ಲಿ ನೀರಿನಾಂಶವು ಕಡಿಮೆಯಾಗುತ್ತಿದ್ದಂತೆ ದೇಹವು ನಿರ್ಜಲೀಕರಣಕೊಳ್ಳುತ್ತದೆ. ಇದರಿಂದ ಸ್ನಾಯುಗಳ ಒತ್ತಡ, ರಕ್ತ ಪೂರೈಕೆ ಕಡಿಮೆ ಮಾಡುತ್ತದೆ ಮತ್ತು ಸ್ನಾಯುಗಳ ಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಸೋಡಿಯಂ , ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಪೋಷಣೆಯ ಕೊರತೆಯು ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.

ಈ ಚಳಿಗಾಲದಲ್ಲಿ ಎಲ್ಲರಿಗೂ ಬಾಯಾರಿಕೆ ಕಡಿಮೆ. ಇದರಿಂದ ಒಣ ಚರ್ಮ, ತುಟಿಗಳು ಒಡೆದುಹೋಗುವುದು, ತಲೆ ಭಾರವಾಗುವುದು ಮತ್ತು ಕ್ರಮೇಣ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲ ಎಲ್ಲಕ್ಕಿಂತ ಮೊದಲು ದೇಹದಲ್ಲಿರುವ ನರಗಳ ಮೇಲೆ ಹೆಚ್ಚು ಪರಿಣಾಮವನ್ನು ಬೀರುತ್ತದೆ.ದೇಹದಲ್ಲಿ ನೀರು ಕಡಿಮೆಯಾದಾಗ ನರಗಳು ತಮ್ಮ ಕೆಲಸವನ್ನು ನಿಧಾನಗೊಳಿಸುತ್ತದೆ. ಇದರಿಂದ, ರಕ್ತ ದಪ್ಪವಾಗುತ್ತದೆ, ರಕ್ತ ಪರಿಚಲನೆ ನಿಧಾನವಾಗುತ್ತದೆ. ಸ್ನಾಯುಗಳ ಒತ್ತಡ, ಬಿಗಿತ ಮತ್ತು ಕೈ ಮತ್ತು ಪಾದಗಳಲ್ಲಿ ಜುಮ್ಮೆನಿಸುವಿಕೆ ಈ ಎಲ್ಲ ಸಮಸ್ಯೆಗಳು ಬಂದೇ ಬರುತ್ತದೆ.

ಆದುರಿಂದ ಚಳಿಗಾಲ ಇರಲಿ ಬೇಸಿಗೆ ಕಾಲವಿರಲಿ ನೀರು ಕುಡಿಯುವುದನ್ನು ಕಡಿಮೆ ಮಾಡಲೇ ಬಾರದು. ಒಂದು ವೇಳೇ ಬಾಯಾರಿಕೆ ಇಲ್ಲ ಎಂದು ನೀರು ಕಡಿಮೆ ಮಾಡಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

8 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

15 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

19 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago