ಇತ್ತೀಚಿನ ದಿನಗಳಲ್ಲಿ ಪಿಜ್ಜಾ(Pizza) ತಿನ್ನುವ ಕ್ರೇಜ್(Craze) ತುಂಬಾ ಹೆಚ್ಚಾಗಿದೆ. ಇಂದು ಅತ್ಯಂತ ಪ್ರಸಿದ್ಧವಾದ ಆಹಾರವೆಂದರೆ(Famous food) ಪಿಜ್ಜಾ. ಮಕ್ಕಳಿಂದ(Children) ಹಿಡಿದು ದೊಡ್ಡವರವರೆಗೆ ಎಲ್ಲರೂ ಇದನ್ನು ಇಷ್ಟಪಡುತ್ತಾರೆ. ಪಿಜ್ಜಾ ಇಟಾಲಿಯನ್(Italian food) ಆಹಾರವಾಗಿದೆ, ಆದರೆ ಇದನ್ನು ಪ್ರಪಂಚದಾದ್ಯಂತ(World wide) ಆನಂದಿಸಲಾಗುತ್ತದೆ. ಆದರೆ ಇದನ್ನು ಅತಿಯಾಗಿ ಸೇವಿಸುವುದು ಕೂಡ ದುಬಾರಿಯಾಗಬಹುದು. ಇದರ ಸೇವನೆಯು ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು(Health issues) ಉಂಟುಮಾಡುತ್ತದೆ. ಅವು ಯಾವುವು ಎಂದು ತಿಳಿದುಕೊಳ್ಳೋಣ…
ಪಿಜ್ಜಾ ತಿಂದರೆ ಆಗುವ ಹಾನಿಗಳು…
1)ಬೊಜ್ಜು: ಪಿಜ್ಜಾನಲ್ಲಿ ಕ್ಯಾಲೋರಿಗಳು, ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು ಹೆಚ್ಚಾಗಿ ಇರುತ್ತವೆ. ನೀವು ಮಿತಿಗಿಂತ ಹೆಚ್ಚು ತಿಂದರೆ, ಹೊಟ್ಟೆ ಮತ್ತು ಸೊಂಟದ ಕೊಬ್ಬು(Cholesterol) ಹೆಚ್ಚಾಗುವುದು ನಿಶ್ಚಿತ. ನೀವು ಯಾವುದೇ ದೈಹಿಕ ಚಟುವಟಿಕೆಯನ್ನು ಮಾಡದಿದ್ದರೆ, ನೀವು ಸ್ಥೂಲಕಾಯತೆಯನ್ನು ಎದುರಿಸಬೇಕಾಗುತ್ತದೆ.
2) ಹೈ ಬಿಪಿ: ಪಿಜ್ಜಾವು ಸಂಸ್ಕರಿಸಿದ ಮಾಂಸಗಳು, ಪೆಪ್ಪೆರೋನಿ, ಸಾಸೇಜ್ ಮತ್ತು ಹೆಚ್ಚಿನ ಉಪ್ಪನ್ನು ಹೊಂದಿರುವ ಹೆಚ್ಚುವರಿ ಚೀಸ್ನಂತಹ ಅನೇಕ ಪದಾರ್ಥಗಳನ್ನು ಒಳಗೊಂಡಿದೆ. ಉಪ್ಪಿನಲ್ಲಿ ಸೋಡಿಯಂ ಅಧಿಕವಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಇದನ್ನು ಅತಿಯಾಗಿ ಸೇವಿಸಿದರೆ, ಹೆಚ್ಚಿನ ರಕ್ತದ ಒತ್ತಡದ(BP) ಸಮಸ್ಯೆ ಸಂಭವಿಸಬಹುದು.
3) ಮಧುಮೇಹ: ಪಿಜ್ಜಾ ಹಿಟ್ಟಿನಲ್ಲಿ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು (ಮೈದಾ ಹಿಟ್ಟು) ಇರುತ್ತದೆ, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಹೆಚ್ಚಳಕ್ಕೆ ಕಾರಣವಾಗಬಹುದು. ಇದು ಮಧುಮೇಹಕ್ಕೆ(Diabetes) ಕಾರಣವಾಗಬಹುದು. ಮಧುಮೇಹಿಗಳಿಗೆ ಪಿಜ್ಜಾ ವಿಷವಿದ್ದಂತೆ.
4) ಅಜೀರ್ಣ : ಅನೇಕ ಜನರು ಪಿಜ್ಜಾದ ರುಚಿಯನ್ನು ಇಷ್ಟಪಡುತ್ತಾರೆ. ಇದರಿಂದಾಗಿ ಜನರು ಇದನ್ನು ಹೆಚ್ಚು ಸೇವಿಸಲು ಪ್ರಾರಂಭಿಸುತ್ತಾರೆ. ಇದರಲ್ಲಿ ಹಾನಿಕಾರಕ ಕೊಬ್ಬಿನಂಶವೂ ಹೆಚ್ಚಿರುವುದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ. ಇದು ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಉಬ್ಬದ ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಸೂಚನೆ: ಪಿಜ್ಜಾವು ಪೋಷಕಾಂಶಗಳಿಗಿಂತ ಹೆಚ್ಚು ಹಾನಿಕಾರಕ ವಸ್ತುಗಳನ್ನು ಒಳಗೊಂಡಿದೆ. ಅದರ ರುಚಿಯನ್ನು ಹೆಚ್ಚಿಸಲು ಅತಿ ಸಂಸ್ಕರಿ ಪದಾರ್ಥಗಳು ಹಾಗೂ ಎಂ ಎಸ್ ಜಿ ಯಂತಹ ರಾಸಾಯನಿಕಗಳನ್ನು ಕೂಡ ಸೇರಿಸಿರುತ್ತಾರೆ. ಪಿಜ್ಜಾವನ್ನು ಹೆಚ್ಚಿನ ಪ್ರಮಾಣದಲ್ಲಿ ಮತ್ತು ದೀರ್ಘಕಾಲದವರೆಗೆ ತಿನ್ನುವ ಅಭ್ಯಾಸವು ಭವಿಷ್ಯದಲ್ಲಿ ಪಾರ್ಶ್ವವಾಯು, ಹೃದ್ರೋಗ, ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಬಾಯಿ ಚಪಲ ಮುಖ್ಯವೆ ಅದು ಆರೋಗ್ಯ ಮುಖ್ಯವೇ ಎಂದು ಯೋಚಿಸಿ ಪಿಜ್ಜಾ ತಿನ್ನಬೇಕೆ ಅಥವಾ ಎಷ್ಟು ತಿನ್ನಬೇಕು ಎಂದು ತಮ್ಮ ಸ್ವಂತ ಬುದ್ಧಿವಂತಿಕೆಯಿಂದ ನಿರ್ಧರಿಸಬೇಕು.
ಮೂಲ – ಕುಮಾರ್ ಚೋಪ್ರಾ, ಸುನಿಲ್ಇ ನಾಮದಾರ ಕನ್ನಡಕ್ಕೆ: ಡಾ. ಕುಲಕರ್ಣಿ ಪಿ. ಎ
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…