Advertisement
ಸುದ್ದಿಗಳು

ಊಹಾ ಪತ್ರಿಕೋದ್ಯಮವೇ ಇಂದು ಬೇಕೇ..? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Share

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ  ಮುಖ್ಯಮಂತ್ರಿ  ಸಿದ್ದರಾಮಯ್ಯ  ವ್ಯಂಗ್ಯವಾಡಿದರು. 

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.  ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು.  “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.

ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು.   ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು  ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು.  ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

5 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

22 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago