Advertisement
ಸುದ್ದಿಗಳು

ಊಹಾ ಪತ್ರಿಕೋದ್ಯಮವೇ ಇಂದು ಬೇಕೇ..? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Share

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ  ಮುಖ್ಯಮಂತ್ರಿ  ಸಿದ್ದರಾಮಯ್ಯ  ವ್ಯಂಗ್ಯವಾಡಿದರು. 

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.  ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು.  “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.

ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು.   ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು  ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು.  ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago