ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು. “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.
ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.
ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು. ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…