Advertisement
Opinion

ತಿಂದ ತಕ್ಷಣ ಶೌಚಾಲಯಕ್ಕೆ ಹೋಗಬೇಕಾಗುತ್ತಾ….? ಏಕೆ….?

Share

ಊಟ(Meal), ತಿಂಡಿಯ(Breakfast) ನಂತರ ವಿಶಿಷ್ಟ ಸಮಸ್ಯೆ ಇರುವ ಎರಡು ಬಗೆಯ ಜನರು ಪ್ರಪಂಚದಲ್ಲಿ ಇದ್ದಾರೆ. ಒಂದು – ಊಟ ಮಾಡಿದ ತಕ್ಷಣ ನಿದ್ರೆಗೆ(Sleeping) ಜಾರುತ್ತಾರೆ. ಮತ್ತು ಎರಡನೆಯ ಬಗೆಯ ಜನ ತಿಂದ ಕೂಡಲೇ ಶೌಚಾಲಯಕ್ಕೆ(Motion) ಓಡುತ್ತಾರೆ. ಮೊದಲ ವರ್ಗದ ಜನರ ಹೆಚ್ಚು ಚಿಂತಿಸಲು ಯಾವುದೇ ಕಾರಣವಿಲ್ಲ. ಆದರೆ, ಎರಡನೇ ಬಗೆಯವರು ಸ್ವಲ್ಪ ಜಾಗೃತರಾಗುವುದು ಅಗತ್ಯ. ತಿಂದ ನಂತರ ಪದೇಪದೇ ಶೌಚಾಲಯಕ್ಕೆ ಹೋಗಬೇಕಾದರೆ, ನಿಮ್ಮ ಆರೋಗ್ಯದ(Health) ಬಗ್ಗೆ ಗಮನ ಹರಿಸಬೇಕು, ಹಾಗೆಂದು ಅಪಾಯಕಾರಿಯಾದ ಬೆಳವಣಿಗೆಗಳು ತಕ್ಷಣಕ್ಕೆ ಇಲ್ಲ.

ತಜ್ಞರ ಪ್ರಕಾರ, ಅಕಾಲಿಕ ಶೌಚಕ್ಕೆ ಹೋಗುವ ಅಭ್ಯಾಸವು ಮುಂದೆ ನಿಮ್ಮನ್ನು ಬಹಳಷ್ಟು ತೊಂದರೆಗೆ ಸಿಲುಕಿಸಬಹುದು. ಆದ್ದರಿಂದ, ತಿಂದ ನಂತರ ತಕ್ಷಣವೇ ಶೌಚಕ್ಕೆ ಹೋಗಬೇಕಾದ ಅನಿವಾರ್ಯತೆ ಏಕೆ ಉಂಟಾಗುತ್ತದೆ ಎಂದು ಅರ್ಥಮಾಡಿಕೊಳ್ಳುವುದು ಅವಶ್ಯಕ.

ಆಹಾರ : ಶೌಚಕ್ಕೆ ಹೋಗುವ ಅಭ್ಯಾಸವು ವ್ಯಕ್ತಿಯ ಆಹಾರಕ್ರಮವನ್ನು ಅವಲಂಬಿಸಿರುತ್ತದೆ. ನಿರಂತರವಾಗಿ ಮಸಾಲೆಯುಕ್ತ ಆಹಾರವನ್ನು ತಿನ್ನುವುದು ಮತ್ತು ಹಸಿ ಸಲಾಡ್ ಅಧಿಕ ಪ್ರಮಾಣದಲ್ಲಿ ತಿನ್ನುವುದು ಪದೇ ಪದೇ ಶೌಚಾಲಯಕ್ಕೆ ಹೋಗಲು ಕಾರಣವಾಗಬಹುದು. ಹೆಚ್ಚಿನ ಫೈಬರ್ ಸೇವನೆಯು ಕರುಳಿನ ಸಡಿಲ ಚಲನೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಫೈಬರ್ ಅಂಶ ಹೆಚ್ಚಿರುವುದರಿಂದ ಪದೇ ಪದೇ ಶೌಚಕ್ಕೆ ಹೋಗಬೇಕಾಗುತ್ತಿದ್ದರೆ ಆಹಾರದಲ್ಲಿ ನಾರಿನಂಶವನ್ನು ಕಡಿಮೆ ಮಾಡುವ ಮೂಲಕ ಸುಲಭವಾಗಿ ನಿಯಂತ್ರಿಸಬಹುದು. ಆದರೆ, ಮಸಾಲೆಯುಕ್ತ ಆಹಾರದಿಂದಾಗಿ ಶೌಚಾಲಯಕ್ಕೆ ಭೇಟಿ ನೀಡಬೇಕಾಗುತ್ತದೆ ಚಿಂತೆಗೆ ಕಾರಣವಾಗುತ್ತವೆ. ಏಕೆಂದರೆ, ಇದು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಆಹಾರ ಅಲರ್ಜಿ : ಕೆಲವರಿಗೆ ವಿಭಿನ್ನ ಅಥವಾ ವಿಶಿಷ್ಟ ಆಹಾರಗಳ ಅಲರ್ಜಿ ಇರುತ್ತದೆ. ಅಲರ್ಜಿ ಇರುವವರು ಈ ಆಹಾರಗಳನ್ನು ಜೀರ್ಣಿಸಿಕೊಳ್ಳುವುದಿಲ್ಲ, ಇದರಿಂದಾಗಿ ಶೌಚಾಲಯಕ್ಕೆ ಹಾಗಾಗಿ ಭೇಟಿ ನೀಡಬೇಕಾದ ಅಗತ್ಯ ಉಂಟಾಗುತ್ತದೆ. ಇವುಗಳಲ್ಲಿ ಮೀನು, ಹಾಲು, ಬೀಜಗಳು, ಮೊಟ್ಟೆಗಳು ಸೇರಿವೆ.

ಕೆರಳುವ ಕರುಳಿನ ಸಹಲಕ್ಷಣಗಳು ( ಇರ್ರಿಟೇಬಲ್ ಬೋವೆಲ್ ಸಿಂಡ್ರೋಮ್) : ಇದೊಂದು ದೊಡ್ಡ ಕರುಳಿನ ಕಾಯಿಲೆ. ಹೊಟ್ಟೆನೋವು, ಚಡಪಡಿಕೆ ಮುಂತಾದ ಲಕ್ಷಣಗಳು ಇದರಲ್ಲಿ ಎದುರಾಗುತ್ತವೆ. ಈ ಕಾಯಿಲೆಯಲ್ಲಿ, ಆಹಾರವು ಹೊಟ್ಟೆಯನ್ನು ಪ್ರವೇಶಿಸಿದ ತಕ್ಷಣ, ಕರುಳುಗಳು ಅದನ್ನು ಸಹಿಸುವುದಿಲ್ಲ. ಆದ್ದರಿಂದ, ಕರುಳಿನ ಚಲನೆಯು ವೇಗವಾಗಿ ಹೆಚ್ಚಾಗುತ್ತದೆ ಮತ್ತು ಆಹಾರವನ್ನು ಜೀರ್ಣಿಸಿಕೊಳ್ಳುವ ಮೊದಲು ಹೊರಹಾಕುತ್ತದೆ. ಇದು ಪದೇ ಪದೇ ಶೌಚಕ್ಕೆ ಹೋಗಲು ಕಾರಣವಾಗುತ್ತದೆ. ಇದು ದೀರ್ಘಕಾಲದ ಕಾಯಿಲೆಯಾಗಿದ್ದು, ಇದು ದೀರ್ಘಕಾಲದವರೆಗೆ ಮುಂದುವರಿದರೆ, ಇದು ಅನೇಕ ಪೋಷಕಾಂಶಗಳ ಕೊರತೆ ಮತ್ತು ಅದಕ್ಕೆ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು.

Advertisement

ಸಂಗ್ರಹ : ಡಾ.ಜಿತೇಂದ್ರ ಜೋಕಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

6 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

17 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

18 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago