ಅಗ್ರಿಕಲ್ಚರ್ ಬಿಎಸ್ಸಿ ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್ ಸಂಬಂಧಿತ ಕೋರ್ಸ್(Agriculture Diploma) ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.
ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್ ಮಾಡಬಹುದಾಗಿದೆ. ಈ ಕೋರ್ಸ್ನಲ್ಲಿ ನಾಲ್ಕು ಸೆಮಿಸ್ಟರ್ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್ಗೆ ಸೇರಿಕೊಳ್ಳಬಹುದು. ಈ ಕೋರ್ಸ್ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್ಸೈಟ್ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…