ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ….!? | ವಿಶೇಷ ‘ಮಾಡಾಳ್ ತಳಿ’ ಅಡಿಕೆ ಗಿಡಗಳು ಲಭ್ಯ | ವೈರಲ್‌ ಆಗಿರುವ ಟ್ರೋಲ್‌ |

March 8, 2023
6:04 PM

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ..? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ವಿಚಿತ್ರ ಚಿತ್ರವೊಂದನ್ನು ಟ್ವೀಟ್ ಮಾಡಿ ಹರಿ ಬಿಟ್ಟಿದೆ. ಇದೀಗ ಈ ಟ್ವೀಟ್ ಭಾರಿ ವೈರಲ್ ಆಗುತ್ತಿದೆ..

ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೆ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ? ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ  ಅವರೆ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror