Advertisement
ವೈರಲ್ ಸುದ್ದಿ

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ….!? | ವಿಶೇಷ ‘ಮಾಡಾಳ್ ತಳಿ’ ಅಡಿಕೆ ಗಿಡಗಳು ಲಭ್ಯ | ವೈರಲ್‌ ಆಗಿರುವ ಟ್ರೋಲ್‌ |

Share

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ..? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ವಿಚಿತ್ರ ಚಿತ್ರವೊಂದನ್ನು ಟ್ವೀಟ್ ಮಾಡಿ ಹರಿ ಬಿಟ್ಟಿದೆ. ಇದೀಗ ಈ ಟ್ವೀಟ್ ಭಾರಿ ವೈರಲ್ ಆಗುತ್ತಿದೆ..

ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೆ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ? ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ  ಅವರೆ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

1 hour ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

3 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

7 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

12 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

21 hours ago