ಅನೇಕರಿಗೆ ದೂರದ ಊರಿಗೆ ಪ್ರವಾಸ ಹೋಗಬೇಕು, ಅಲ್ಲಿನ ಜಾಗಗಳನ್ನು ನೋಡಬೇಕು, ತಿಳಿದುಕೊಳ್ಳಬೇಕೆಂದಿರುತ್ತದೆ. ಆದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಹೋಗುವ ಸೌಲಭ್ಯ ಇರೋದಿಲ್ಲ. ಆದ್ರೆ ಇದೀಗ ಇಂಥ ಪ್ರವಾಸಿಗರಿಗಾಗಿ ಕೆಎಸ್ಆರ್ಟಿಸಿಯಿಂದ ಪ್ಯಾಕೇಜ್ ಟೂರ್ ಘೋಷಿಸಲಾಗಿದೆ. ಮಳೆಗಾಲದಲ್ಲಿ ಜಲಪಾತಗಳನ್ನು ವೀಕ್ಷಿಸಬೇಕು ಎಂಬ ಆಸೆ ಇದೆಯಾ? ಹೇಗೆ ಹೋಗುವುದು ಎಂದು ಚಿಂತೆ ಮಾಡ್ತಾ ಇದ್ದೀರಾ? ಅಂಥವರಿಗಾಗಿ ಜಲಪಾತಗಳಿಗೆ ಕೆಎಸ್ಆರ್ಟಿಸಿ ಪ್ಯಾಕೇಜ್ ಟೂರ್ ಆರಂಭಿಸಿದೆ.
ವೀಕೆಂಡ್ನಲ್ಲಿ ಅಂದ್ರೆ ಶನಿವಾರ ಮತ್ತು ಭಾನುವಾರ ಈ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ. 12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ. ಆಸಕ್ತಿ ಇರುವವರ ಪ್ರವಾಸ ಕೈಗೊಳ್ಳಬಹುದು. ಬೆಂಗಳೂರಿನಿಂದ ಪ್ಯಾಕೇಜ್ ಟೂರ್ ನ ಕರ್ನಾಟಕ ಸಾರಿಗೆ ಬಸ್ ಕಾರ್ಯಾಚರಣೆಗೊಳ್ಳಲಿದೆ. ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಸ್ಥಳಗಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ವಯಸ್ಕರಿಗೆ 450 ರೂಪಾಯಿ ಮತ್ತು 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ 300 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ. ಇದರಲ್ಲಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಸೇರಿಲ್ಲ.
ಜೋಗ ಟೂರ್-ಜೋಗಕ್ಕೆ ಶುಕ್ರವಾರ ರಾತ್ರಿ 9.30ಕ್ಕೆ ಬೆಂಗಳೂರಿನಿಂದ ಹೊರಟು ಶನಿವಾರ ಬೆಳಿಗ್ಗೆ 5ಕ್ಕೆ ಸಾಗರಕ್ಕೆ ತಲುಪಲಿದೆ. ಅಲ್ಲಿ ವಿಶ್ರಾಂತಿ, ಉಪಾಹಾರ ಮುಗಿಸಿ ವರದಹಳ್ಳಿಗೆ, ಅಲ್ಲಿಂದ ವರದಮೂಲ, ಇಕ್ಕೇರಿ, ಕೆಳದಿ ಸುತ್ತಾಡಿಕೊಂಡು ಮತ್ತೆ ಮಧ್ಯಾಹ್ನದ ಊಟಕ್ಕೆ ಸಾಗರಕ್ಕೆ ತಲುಪಲಿದೆ. ಅಲ್ಲಿಂದ ಜೋಗಕ್ಕೆ ತೆರಳಿ ಸಂಜೆ 7ಕ್ಕೆ ಮತ್ತೆ ಸಾಗರಕ್ಕೆ ಬಂದು ಶಾಪಿಂಗ್, ಊಟ ಮುಗಿಸಿ ರಾತ್ರಿ 10ಕ್ಕೆ ಬೆಂಗಳೂರಿಗೆ ಹೊರಡಲಿದೆ. ಮರುದಿನ ಬೆಳಿಗ್ಗೆ 5ಕ್ಕೆ ಬೆಂಗಳೂರಿಗೆ ತಲುಪಲಿದೆ. ಮೊದಲ ಪ್ರವಾಸ ಆ.11ರಂದು ಆರಂಭಗೊಳ್ಳಲಿದೆ. ವಯಸ್ಕರಿಗೆ 2,500, ಮಕ್ಕಳಿಗೆ 2,300 ಪ್ರಯಾಣದರ ನಿಗದಿ ಮಾಡಲಾಗಿದೆ. ಇದಕ್ಕೆ ಐರಾವತ ಅಥವಾ ಸ್ಪೀಪರ್ ಬಸ್ ಸೌಲಭ್ಯ ನೀಡಲಾಗವುದು ಎಂದು KSRTC ತಿಳಿಸಿದೆ. ಟೂರ್ ಸಂಬಂಧಿತ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 7760990287/7760990988. ಅಥವಾ KSRTC ಅಧಿಕೃತ ವೆಬ್ಸೈಟ್ ಮೂಲಕ ಬುಕ್ಕಿಂಕ್ ಮಾಡಬಹುದು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…