ಅನೇಕರಿಗೆ ದೂರದ ಊರಿಗೆ ಪ್ರವಾಸ ಹೋಗಬೇಕು, ಅಲ್ಲಿನ ಜಾಗಗಳನ್ನು ನೋಡಬೇಕು, ತಿಳಿದುಕೊಳ್ಳಬೇಕೆಂದಿರುತ್ತದೆ. ಆದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಹೋಗುವ ಸೌಲಭ್ಯ ಇರೋದಿಲ್ಲ. ಆದ್ರೆ ಇದೀಗ ಇಂಥ ಪ್ರವಾಸಿಗರಿಗಾಗಿ ಕೆಎಸ್ಆರ್ಟಿಸಿಯಿಂದ ಪ್ಯಾಕೇಜ್ ಟೂರ್ ಘೋಷಿಸಲಾಗಿದೆ. ಮಳೆಗಾಲದಲ್ಲಿ ಜಲಪಾತಗಳನ್ನು ವೀಕ್ಷಿಸಬೇಕು ಎಂಬ ಆಸೆ ಇದೆಯಾ? ಹೇಗೆ ಹೋಗುವುದು ಎಂದು ಚಿಂತೆ ಮಾಡ್ತಾ ಇದ್ದೀರಾ? ಅಂಥವರಿಗಾಗಿ ಜಲಪಾತಗಳಿಗೆ ಕೆಎಸ್ಆರ್ಟಿಸಿ ಪ್ಯಾಕೇಜ್ ಟೂರ್ ಆರಂಭಿಸಿದೆ.
ವೀಕೆಂಡ್ನಲ್ಲಿ ಅಂದ್ರೆ ಶನಿವಾರ ಮತ್ತು ಭಾನುವಾರ ಈ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ. 12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ. ಆಸಕ್ತಿ ಇರುವವರ ಪ್ರವಾಸ ಕೈಗೊಳ್ಳಬಹುದು. ಬೆಂಗಳೂರಿನಿಂದ ಪ್ಯಾಕೇಜ್ ಟೂರ್ ನ ಕರ್ನಾಟಕ ಸಾರಿಗೆ ಬಸ್ ಕಾರ್ಯಾಚರಣೆಗೊಳ್ಳಲಿದೆ. ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಸ್ಥಳಗಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ವಯಸ್ಕರಿಗೆ 450 ರೂಪಾಯಿ ಮತ್ತು 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ 300 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ. ಇದರಲ್ಲಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಸೇರಿಲ್ಲ.
ಜೋಗ ಟೂರ್-ಜೋಗಕ್ಕೆ ಶುಕ್ರವಾರ ರಾತ್ರಿ 9.30ಕ್ಕೆ ಬೆಂಗಳೂರಿನಿಂದ ಹೊರಟು ಶನಿವಾರ ಬೆಳಿಗ್ಗೆ 5ಕ್ಕೆ ಸಾಗರಕ್ಕೆ ತಲುಪಲಿದೆ. ಅಲ್ಲಿ ವಿಶ್ರಾಂತಿ, ಉಪಾಹಾರ ಮುಗಿಸಿ ವರದಹಳ್ಳಿಗೆ, ಅಲ್ಲಿಂದ ವರದಮೂಲ, ಇಕ್ಕೇರಿ, ಕೆಳದಿ ಸುತ್ತಾಡಿಕೊಂಡು ಮತ್ತೆ ಮಧ್ಯಾಹ್ನದ ಊಟಕ್ಕೆ ಸಾಗರಕ್ಕೆ ತಲುಪಲಿದೆ. ಅಲ್ಲಿಂದ ಜೋಗಕ್ಕೆ ತೆರಳಿ ಸಂಜೆ 7ಕ್ಕೆ ಮತ್ತೆ ಸಾಗರಕ್ಕೆ ಬಂದು ಶಾಪಿಂಗ್, ಊಟ ಮುಗಿಸಿ ರಾತ್ರಿ 10ಕ್ಕೆ ಬೆಂಗಳೂರಿಗೆ ಹೊರಡಲಿದೆ. ಮರುದಿನ ಬೆಳಿಗ್ಗೆ 5ಕ್ಕೆ ಬೆಂಗಳೂರಿಗೆ ತಲುಪಲಿದೆ. ಮೊದಲ ಪ್ರವಾಸ ಆ.11ರಂದು ಆರಂಭಗೊಳ್ಳಲಿದೆ. ವಯಸ್ಕರಿಗೆ 2,500, ಮಕ್ಕಳಿಗೆ 2,300 ಪ್ರಯಾಣದರ ನಿಗದಿ ಮಾಡಲಾಗಿದೆ. ಇದಕ್ಕೆ ಐರಾವತ ಅಥವಾ ಸ್ಪೀಪರ್ ಬಸ್ ಸೌಲಭ್ಯ ನೀಡಲಾಗವುದು ಎಂದು KSRTC ತಿಳಿಸಿದೆ. ಟೂರ್ ಸಂಬಂಧಿತ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 7760990287/7760990988. ಅಥವಾ KSRTC ಅಧಿಕೃತ ವೆಬ್ಸೈಟ್ ಮೂಲಕ ಬುಕ್ಕಿಂಕ್ ಮಾಡಬಹುದು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…