ವಿದ್ಯಾ ಎಸ್ ಅವರು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊಫೆಸರ್ ಡಾ. ಗುರುಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಸುಮಾರು ಹದಿನಾಲ್ಕು ವರ್ಷಗಳಿಂದ ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಾಹುಬಲಿ ಪ್ರಾಕೃತ ವಿದ್ಯಾಪೀಠ (ರಿ) ದಿಂದ ಸಂಚಾಲಿತ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ 2017-18 ನೇ ಸಾಲಿನ ಪ್ರಾಕೃತ ಡಿಪ್ಲೊಮ ಪರೀಕ್ಷೆಯಲ್ಲಿ ನಾಲ್ಕನೆಯ ರಯಾಂಕ್ ಗಳಿಸಿರುತ್ತಾರೆ. ಈಕೆ ಮಂಗಳೂರು ನಿವಾಸಿಯಾಗಿದ್ದು ಸುಳ್ಯ ತಾಲ್ಲೂಕಿನ ಬಾಳುಗೋಡು ಗ್ರಾಮದ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…