ಸುದ್ದಿಗಳು

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ  ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement

 ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದು ಚಿತ್ರನಟ ಶಿವರಾಜ್ ಕುಮಾರ್ ಹೇಳಿದರು.

ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೊದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

11 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

13 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

19 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

19 hours ago